ಜಲಾಶಯದ ಬಳಿ ಹುಲ್ಲು ಬೆಳೆಸುವ ಹೆಸರಲ್ಲಿ ಹಣ ಲೂಟಿ: ಆರ್.ವಿ.ನಾಯಕ ಆರೋಪ

ಸುರಪುರ: ನಾರಾಯಣಪೂರ ಜಲಾಶಯದ ಮೇಲ್ಬಾಗದಲ್ಲಿನ ಕಾಮಗಾರಿ ಹೆಸರಿನಲ್ಲಿ ವಿಭಾಗ ಕಛೇರಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆಸುತ್ತಿದ್ದಾರೆ, ಒಂದೆ ಕಾಮಗಾರಿಗೆ ಎರಡೆರಡು ಬಾರಿ ಟೆಂಡರ್ ಕರೆದು ಹಣ ಲಪಟಾಯಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ನನ್ನ ಅಧಿಕಾರಾವಧಿಯಲ್ಲಿ ನಾರಾಯಣಪುರ ಆರ್.ಬಿ.ಇ.ಡಿ ಮತ್ತು ಎಲ್.ಬಿ.ಇ.ಡಿಯ ಮೇಲ್ಬಾಗದಲ್ಲಿ ಹುಲ್ಲು ನೆಡುವುದು ಮತ್ತು ಇದಕ್ಕೆ ಸ್ಪಿಂಕಲರ್‌ಗಳನ್ನು ಅಳವಡಿಸುವ ಕಾಮಗಾರಿಗೆ ಟೆಂಡರ್ ಕರೆದು ಪೂರ್ಣಗೊಳಿಸಲಾಗಿತ್ತು. ಆದರೆ ಕೇವಲ ನಾಲ್ಕೇ ವರ್ಷದಲ್ಲಿ ಅದೇ ಕಾಮಗಾರಿಗೆ ಪುನಃ ಟೆಂಡರ್ ಕರೆದು ಕೋಟ್ಯಾಂತರ ರೂಪಾಯಿ ನಿಗದಿ ಪಡಿಸಿರುವುದನ್ನು ಗಮನಿಸಿದರೆ ಸರ್ಕಾರದ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳುವ ತಂತ್ರ ಹೂಡಿರಿವುದು ಮೇಲ್ನೊಟಕ್ಕೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ

ಅವ್ಯವಹಾರ ನಡೆಸುತ್ತಿರುವ ಕುರಿತು ಹಲವು ಬಾರಿ ನಾರಾಯಣಪುರ ಆಣೆಕಟ್ಟು ವಿಭಾಗದ ಹಿರಿಯ ಅಧಿಕಾರಗಳಿಗೆ ಪತ್ರಬರೆದು ತಿಳಿಸಿದರೂ ಸಹ ಯಾವೋಬ್ಬ ಅಧಿಕಾರಿಯು ಕಾಮಗಾರಿಯನ್ನು ನಿಲ್ಲಿಸಿ ಸದರಿ ವಿಷಯದ ಕುರಿತು ಪರಿಶೀಲಿಸದೆ ಇರುವುದನ್ನು ಗಮನಿಸಿದರೆ ಈ ಅವ್ಯವಹಾರಗಳಲ್ಲಿ ಅಧಕಾರಿಗಳ ಶಾಮೀಲಾಗಿರುವುದು ಸ್ಪಷ್ಟವಾಗುತ್ತದೆ.

ಈ ರೀತಿಯಲ್ಲಿ ಸರ್ಕಾರದಿಂದ ಬಂದಿರುವ ಬೃಹತ್ ಮೊತ್ತದ ಅನುದಾನವನ್ನು ಅನಾವಶ್ಯಕ ಟೆಂಡರ್ ಕರೆದು ಬೋಗಸ್ ಬಿಲ್ ಮಾಡುತ್ತಿರುವ ಕುರಿತು ಹಲವುಬಾರಿ ಕೆ.ಬಿ.ಜೆ.ಎನ್.ಎಲ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರಬರೆದು ತಿಳಿಸಲಾಗಿತ್ತು ಆದರೂ ಸಹ ಯಾವುದೆ ಕ್ರಮವಹಿಸದೆ ಇರುವುದು ಅಧಿಕಾರಿಗಳ ನಿರ್ಲಕ್ಷತನ ಎದ್ದು ತೋರುತ್ತಿದೆ. ಕಾರಣ ಸದರಿ ಕಾಮಗಾರಿಗಳನ್ನು ತಕ್ಷಣವೆ ನಿಲ್ಲಿಸಿ ಈ ಅವ್ಯವಹಾರದಲ್ಲಿ ಶಾಮೀಲಾದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಮುಂದಿನದಿನಗಳಲ್ಲಿ ನಾರಾಯಣಪೂರ ಆಣೆಕಟ್ಟು ವಿಭಾಗದ ಮುಖ್ಯ ಅಭಿಯಂತರರ ಕಛೇರಿ ಮುಂಭಾಗದಲ್ಲಿ ಪ್ರತಿಭಟಣೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

10 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420