ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ 65ನೇ ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ನಾಡಿನ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆ ಗೈದವರಿಗೆ ನೀಡುವ ವಿವಿಧ ಪ್ರಶಸ್ತಿಗಳ ಪ್ರಧಾನ ಸಮಾರಂಭದಲ್ಲಿ ” ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-‘ ಗೆ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಬಳ್ಳಾರಿ ಜಿಲ್ಲಾ ಗೌರವಾಧ್ಯಕ್ಷ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪನವರು ಭಾಜನರಾಗಿದ್ದಾರೆ.
ವಿವಿಧ ರಂಗಗಳಲ್ಲಿ ಗಣನೀಯವಾಗಿ ಸಮಾಜ ಹಾಗೂ ಬಡವರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಪ್ರವೀಣರಾಗಿರುವ ವಕೀಲ ಮೋಹನ್ ಕುಮಾರ್ ದಾನಪ್ಪಗೆ 2020 ರ ‘ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಒಲಿದಿರುವುದು ಕಂಪ್ಲಿ ಭಾಗದ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.
ಇದೇ ತಿಂಗಳ 22 ರಂದು ಬೆಂಗಳೂರಿನ ಯಲಹಂಕ ಉಪನಗರದ ಹೋಟೆಲ್ ಪ್ರಖ್ಯಾತಿಯಲ್ಲಿ ವಕೀಲ ಮೋಹನ್ಕುಮಾರ್ ದಾನಪ್ಪರವರಿಗೆ ಪ್ರಶಸ್ತಿ ಪ್ರದಾನ ಮಾಡುವುದಾಗಿ ಚಲನಚಿತ್ರ ನಟ,ನಿರ್ದೇಶಕ, ಸಾಹಿತಿ, ಪತ್ರ ಕರ್ತ, ಹಾಗೂ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಗುಣವಂತ ಮಂಜು ರವರು ಪತ್ರದ ಮೂಲಕ ತಿಳಿಸಿರುತ್ತಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…