ಸುರಪುರ: ಕನ್ನಡ ನಾಡಿನ ಪತ್ರಿಕೋದ್ಯಮ ಮತ್ತು ಸಾಹಿತ್ಯ ಲೋಕಕ್ಕೆ ರವಿ ಬೆಳಗೆರೆಯವರ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ ಹಾಗು ಕಸಾಪ ಮಾಜಿ ಅಧ್ಯಕ್ಷ ಶಾಂತಪ್ಪ ಬೂದಿಹಾಳ ಹೇಳಿದರು.
ರಂಗಂಪೇಟೆ ಶ್ರೀ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಶರಣ ಸೇವಾ ಸಂಸ್ಥೆವತಿಯಿಂದ ಆಯೋಜಿಸಿದ ನುಡಿನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಶಾಂತಪ್ಪ ಬೂದಿಹಾಳರವರು ರವಿಬೆಳೆಗೆರೆ ಪತ್ರಿಕಾ ಲೋಕದ ವಿಶೇಷ ಬರಹಗಾರರಾಗಿ ಗುರುತಿಸಿಕೊಂಡು ಕಳೆದ ಎರಡು ದಶಕದ ಅವಧಿಯಲ್ಲಿ ಅನೇಕ ಜನ ಹೊಸ ಓದುಗರನ್ನು ಸೃಷ್ಠಿಸಿದ ಕೀರ್ತಿ ಬೆಳೆಗೆರೆಯವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷರು ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ ಕೀರ್ತಿ ರವಿ ಬೆಳೆಗೆರಿಯವರಿಗೆ ಸಲ್ಲುತ್ತದೆ ಎಂದು ಹೇಳಿದರು.
ವೀರಶೈವ ಲಿಂಗಾಯತ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೋಣೂರು ಮಾತನಾಡಿ ಪತ್ರಿಕಾ ಲೋಕಕ್ಕೆ ಮತ್ತು ಅನೇಕ ಯುವ ಬರಹಗಾರರಿಗೆ ಸ್ಪೂರ್ತಿದಾಯಕರಾದ ರವಿ ಬೆಳೆಗೆರೆಯವರು ನಮ್ಮನ್ನು ಅಗಲಿದ್ದು ಈ ಕನ್ನಡ ನಾಡಿಗೆ ಅಪಾರವಾದ ನಷ್ಟವನ್ನು ಹೊಂದಿದಂತಾಗಿದೆ ಎಂದು ಹೇಳಿದರು.
ಶ್ರೀ ಶರಣ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶಿವರಾಜ ಕಲಕೇರಿಯವರು ಮಾತನಾಡಿ ಇವರು ಬರೆದ ಅನೇಕ ಕಾದಂಬರಿಗಳು ಮತ್ತು ಹಾಯ್ ಬೆಂಗಳೂರು ಎಂಬ ಪತ್ರಿಕೆ ಮೂಲಕ ಈ ನಾಡಿಗೆ ಓದುಗರನ್ನ ಹೆಚ್ಚಿಸುವಂತ ಶಕ್ತಿ ರವಿಬೆಳೆಗೆರೆಯವರು ಆಗಿದ್ದರು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ರವಿಗೌಡ ಹೇಮನೂರು, ವೀರಭದ್ರಪ್ಪ ಕುಂಬಾರ, ಅಂಬ್ರೇಶ ಕುಂಬಾರ, ಮಲ್ಲು ಬಾದ್ಯಾಪೂರ, ವೀರೇಶ ಹಳಿಮನಿ, ಅಂಬ್ರೇಶ ಪರತಾಬಾದ ಇದ್ದರು. ಪ್ರವೀಣ ಜಕಾತಿ ನಿರೂಪಿಸಿ ವಂದಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…