ಸುರಪುರ: ಖ್ಯಾತ ಪತ್ರಕರ್ತ ಕಲಾವಿದ ಹಾಗು ಶಿಕ್ಷಣ ಪ್ರೇಮಿ ಬರಹಗಾರ ರವಿ ಬೆಳಗೆರೆಯವರ ನಿಧನಕ್ಕೆ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ಸುರಪುರ ತಾಲೂಕು ಘಟಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ ಸಂತಾಪ ವ್ಯಕ್ತಪಡಿಸಿ,ರವಿ ಬೆಳಗೆರೆ ಕೇವಲ ತಮ್ಮ ಬದುಕಿಗಾಗಿ ಬರವಣಿಗೆಯನ್ನು ಬಳಸದೆ ಇಡೀ ಸಮಾಜದ ಸುಧಾರಣೆಗಾಗಿ ಮತ್ತು ಭ್ರಷ್ಟಾಚಾರದ ನಿರ್ಮೂಲನೆಗಾಗಿ ಮತ್ತು ಅಪರಾಧಗಳ ಕಡಿವಾಣಕ್ಕಾಗಿ ಪತ್ರಿಕೆಯಲ್ಲಿ ಬರೆಯುತ್ತಿದ್ದರು.
ಅವರ ಸಂಪಾದಕೀಯದ ಹಾಯ್ ಬೆಂಗಳೂರು ಪತ್ರಿಕೆಯು ಅದೆಷ್ಟೋ ಜನ ಅಪರಾಧ ಲೋಕದ ಯುವಕರನ್ನು ಬದಲಾಯಿಸಿದೆ, ಸಾವಿರಾರು ಜನ ಅಪರಾಧಿಗಳ ಮಕ್ಕಳಿಗೆ ತಮ್ಮ ಪ್ರಾರ್ಥನಾ ವಿದ್ಯಾಮಂದಿರದ ಮೂಲಕ ಅಕ್ಷರ ನೀಡಿ ಬಾಳನ್ನು ಬೆಳಗಿಸಿದ ಮಹಾನ್ ವ್ಯಕ್ತಿ.ಅಲ್ಲದೆ ಅವರು ಬರೆದ ಸುಮಾರು ಅರವತ್ತಕ್ಕೂ ಹೆಚ್ಚಿನ ಕೃತಿಗಳು ಪ್ರತಿ ಓದುಗನಲ್ಲಿ ಒಂದು ಸಂಚಲನ ಮೂಡಿಸವಂತವು ಹಾಗು ಲಕ್ಷಾಂತರ ಓದುಗರಿಗೆ ಬರವಣಿಗೆಯ ಹಾದಿಯನ್ನು ತಿಳಿಸಿರುವಂತವು,ಅಂತಹ ಅಕ್ಷರ ಮಾಂತ್ರಿಕ ಇನ್ನಿಲ್ಲವಾಗಿರುವುದು ಈ ನಾಡಿಗೆ ಬದುದೊಡ್ಡ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ರವಿ ಬೆಳಗೆರೆಯವರ ನಿಧನಕ್ಕೆ ಕೆಜೆಯು ತಾಲೂಕು ಉಪಾಧ್ಯಕ್ಷ ಮಲ್ಲು ಗುಳಗಿ ರವಿರಾಜ ಕಂದಳ್ಳಿ ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಬಾವಿ ಕಾರ್ಯದರ್ಶಿ ಮಲ್ಲಿಕಾರ್ಜುನ ತಳ್ಳಳ್ಳಿ ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ ಧೀರೆಂದ್ರ ಕುಲಕರ್ಣಿ ಶ್ರೀಕರ ಜೋಷಿ ಹೊನ್ನಪ್ಪ ತೇಲ್ಕರ್ ಮುರಳಿಧರ ಅಂಬುರೆ ಮಾಳಪ್ಪ ಕಿರದಹಳ್ಳಿ ಮನಮೋಹನ ದೇವಾಪುರ ನಾಗರಾಜ ದೇಸಾಯಿ ರಾಘವೇಂದ್ರ ಮಾಸ್ತರ್ ಪುರುಷೋತ್ತಮ ದೇವತ್ಕಲ್ ಮದನ್ ಕಟ್ಟಿಮನಿ ಕಲೀಂ ಫರೀದಿ ಸೇರಿದಂತೆ ಅನೇಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…