ಖಾಸಗಿ ಶಾಲೆ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಂಸದರಿಗೆ ಮನವಿ

ಕೋಲಾರ: ಜಿಲ್ಲೆಯಲ್ಲಿನ ಖಾಸಗಿ ಶಾಲೆ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಸದರಾದ ಎಸ್ ಮುನಿಸ್ವಾಮಿರವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ ಕೋಲಾರ ಘಟಕದ ವತಿಯಿಂದ ಇಂದು ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ಕೋಲಾರ ಜಿಲ್ಲಾಧ್ಯಕ್ಷರಾದ ಮಂಜುನಾಥ್.ಆರ್.ಎ. ಮಾತನಾಡಿ ಕಳೆದ ಎಂಟು ತಿಂಗಳುಗಳಿಂದ ಖಾಸಗಿ ಶಿಕ್ಷಕರುಗಳಿಗೆ, ವೇತನವಿಲ್ಲದೆ ಜೀವನ ನಡೆಸಲು
ದುಸ್ತರವಾಗಿದೆ. ಅವರ ಹಾಗು ಅವರ ಕುಟುಂಬಗಳು ಅವರ ದುಡಿಮೆಯನ್ನೇ ಅವಲಂಬಿಸಿವೆ, ಕೊವಿಡ್ 19 ರ ಈ ಸಮಯದಲ್ಲಿ ಶಿಕ್ಷಕರು ತರಕಾರಿಗಳನ್ನು ಮಾರುವುದು, ಗಾರೆ ಕೆಲಸ ಮಾಡುವುದು ಹಾಗು ಇತರೆ ಕೂಲಿಕೆಲಸಗಳನ್ನು ಮಾಡುತ್ತಿದ್ದರು ಸಹ ಅವರಿಗೆ ನಿಗಧಿತ ಕೆಲಸ ದೊರೆಯುತ್ತಿಲ್ಲ.
ಮಾನ್ಯ ಶಿಕ್ಷಣ ಸಚಿವರು ಖಾಸಗಿ ಶಿಕ್ಷಕರಿಗೆ ಸಹಾಯ ಧನ 10 ಸಾವಿರ ರೂಗಳನ್ನು ನೀಡುವುದಾಗಿ ಭರವಸೆ ನೀಡಿದರು. ಆದರೆ ಇದುವರೆಗೂ ಯಾವೊಬ್ಬ ಖಾಸಗಿ ಶಿಕ್ಷಕರಿಗೆ ಈ ಧನ ಸಹಾಯ ಅವರ ಕೈ ಸೇರಿಲ್ಲ. ಖಾಸಗಿ ಶಾಲೆಗಳನ್ನೇ ನಂಬಿಕೊಂಡಿದ್ದ ಸಮಾರು 1.ಲಕ್ಷದ 48, ಸಾವಿರ ಖಾಸಗಿ ಶಿಕ್ಷಕರ ಬದುಕು ಇಂದು ಬೀದಿಗೆ ಬಂದಿವೆ. ಕೂಡಲೇ ಸರ್ಕಾರ ಖಾಸಗಿ ಶಿಕ್ಷಕರ ನೆರವಿಗೆ ಬರಬೇಕೆಂದು ತಿಳಿಸಿದರು.
ಮಾನ್ಯ ಸಂಸದರಾದ ಎಸ್. ಮುನಿಸ್ವಾಮಿರವರು ಮಾತನಾಡಿ ಕೂಡಲೇ ಖಾಸಗಿ ಶಿಕ್ಷಕರ ಸಮಸ್ಯೆಗಳನ್ನು ಮಾನ್ಯ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರ ಗಮನಕ್ಕೆ ತಂದು ಪರಿಹಾರ ಕೊಡಿಸುವುದಾಗಿ ತಿಳಿಸಿದರು.
ಅಲ್ಲದೆ ಕೊರೊನದಿಂದ ಜೀವನ ನಡೆಸಲು ಸಹ ಕಷ್ಟ ಪಡುತ್ತಿರುವ ಜಿಲ್ಲೆಯಲ್ಲಿನ ಖಾಸಗಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ವೈಯುಕ್ತಿಕವಾಗಿ ಸಹಾಯ ಮಾಡುವುದಾಗಿ ಸಂಸದರಾದ ಎಸ್.ಮುನಿಸ್ವಾಮಿರವರು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕೋಲಾರ ಖಾಸಗಿ ಶಿಕ್ಷಕರ ಬಳಗದ ಜಿಲ್ಲಾಧ್ಯಕ್ಷರಾದ ಮಂಜುನಾಥ್.ಆರ್.ಎ. ರಾಜ್ಯ ಖಾಸಗಿ ದೈಹಿಕ ಶಿಕ್ಷಣ ಸಂಘದ ರಾಜ್ಯಾಧ್ಯಕ್ಷರಾದ ಸಂಪತ್ ಕುಮಾರ್, ಪದಾಧಿಕಾರಿಗಳಾದ ಸುಕುಮಾರ್, ನಿಶಾಂತ್, ಅಮರನಾಥ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

1 hour ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

8 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

19 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420