ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ನಿಧನಕ್ಕೆ: ಅಂಬಾರಾಯ ಅಷ್ಠಗಿ ಸಂತಾಪ

0
34

ಕಲಬುರಗಿ: ಪತ್ರಕರ್ತ,ಬರಹಗಾರ ಹಾಗೂ  ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕ  ರವಿ ಬೆಳಗೆರೆ ನಿಧನಕ್ಕೆ   ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತರಾಗಿ,ಲೇಖಕರಾಗಿ,ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು ಪ್ರಾರ್ಥನಾ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದರು.ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ,ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಂಬಾರಾಯ ಅಷ್ಠಗಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here