ಎ.ಐ.ಯು.ಟಿ.ಯು.ಸಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರಿಗೆ ಲೇಬರ್ ಕಾರ್ಡ್ ವಿತರಣೆ

ಕಲಬುರಗಿ: ಎ.ಐ.ಯು.ಟಿ.ಯು.ಸಿ ಜಿಲ್ಲಾ ಸಮಿತಿ ವತಿಯಿಂದ ಗೊಬ್ಬುರ ಬಿ. ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಲೇಬರ್ ಕಾರ್ಡ್ ವಿತರಿಸಲಾಯಿತು.

ಅಫಜಲ್‌ಪುರ ತಾಲೂಕಿನ ಗೊಬ್ಬುರ ಬಿ. ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸೌಲಭಗಳು ತಳಮಟ್ಟಲ್ಲಿರುವಂತಹ ಕಾರ್ಮಿಕರಿಗೆ ತಲುಪಬೇಕೆಂದು ಕಾರ್ಮಿಕ ಸಂಘಟನೆ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಭಾಷಣಕಾರರಾಗಿ ಆಗಮಿಸಿದ ಎ.ಐ.ಯು.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಎಂ. ಶರ್ಮಾ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಸರಕಾರದ ಸಾಕಷ್ಟು ಸೌಕರ್ಯಗಳು ಬಡ ಕಾರ್ಮಿಕರಿಗೆ ತಲುಪುತ್ತಿಲ್ಲ. ಇಂದಿನ ಸರ್ಕಾರಗಳು ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲದೆ ಬಂಡವಾಳಿಗರ ಗುಲಾಮರಂತೆ ವರ್ತಿಸುತ್ತಿವೆ. ಇದರಿಂದಾಗಿ ನಿರುದ್ಯೋಗ, ಬಡತನ, ದೇಶದಲ್ಲಿ ತಾಂಡವವಾಡುತ್ತಿದೆ. ರೈತರ ಪರಿಸ್ಥಿತಿ ದಿನೆದಿನೆ ಹಾಳಾಗುತ್ತಿದೆ. ಹಿಗಿರುವಾಗ ಸರ್ಕಾರಿ ಸ್ವಾಮ್ಯದ ಕ್ಷೇತ್ರಗಳು ಖಾಸಗಿ ಮಾಲಿಕರಿಗೆ ನೀಡುವ ಮೂಲಕ ದೇಶ ಕೊಳ್ಳೆ ಹೊಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಂವಿಧಾನ ನಿಯಮದ ಪ್ರಕಾರ ಎಲ್ಲಾ ಹಕ್ಕುದಾರರಿಗೆ ಸಿಗಲೇಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿಯ ಕಾರ್ಯಕಾರಿನಿ ಸಮಿತಿಯ ಸದಸ್ಯರಾದ ಮಲ್ಲಿನಾಥ ಸಿಂಘೆ ರವರು ವಹಿಸಿಕೊಂಡಿದ್ದರು. ವೇದಿಕೆ ಮೇಲೆ ಮಹಿಳಾ ಸಂಘಟನೆಯ ಜಿಲ್ಲಾ ನಾಯಕರಾದ  ರಾಧಾ ಬಿ. ಉಪಸ್ಥಿತರಿದ್ದರು.

ರಾಜು ಪಡಪಟ್ಟಿ, ಮಂಜುಳಾ, ಪ್ರೀತಿ, ಶಿಲ್ಪಾ, ಚನ್ನಮಲ್ಲಪ್ಪ ಶಾಂತಪ್ಪ, ಮೀನಾಕ್ಷಿ, ಲಕ್ಷ್ಮೀ, ಕಸ್ತೂರಿಬಾಯಿ, ಶಿವಾನಂದ, ಮಲ್ಲಪ್ಪ ಚಂದ್ರಕಾಂತ, ಯಲ್ಲಾಬಾಯಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

58 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420