ಗುಂಡಾಪುರದಲ್ಲಿ ರೈತ ಸಂಘದ ಗ್ರಾಮ ಘಟಕ ರಚನೆ

0
60

ಶಹಾಪುರ : ದೇಶದ ಪ್ರತಿಯೊಬ್ಬ ರೈತರಿಗಾಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡಿ ನ್ಯಾಯ ದೊರಕಿಸಿಕೊಡುವುದು ಅನಿವಾರ್ಯತೆ ಇದೆ ಆದ್ದರಿಂದ ರೈತ ಸಂಘಟನೆ ಭಲಪಡಿಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ರೈತ ಮುಖಂಡರಾದ ಮಹೇಶಗೌಡ ಸುಬೇದಾರ ಹೇಳಿದರು.

ಶಹಾಪುರ ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ರಚಿಸಿ ಮಾತನಾಡಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾರ್ಯಕರ್ತರು ಸಂಘದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

Contact Your\'s Advertisement; 9902492681

ರೈತ ಈ ದೇಶದ ಬೆನ್ನೆಲುಬು ಅಂತ ಘೋಷ ವಾಕ್ಯವಾಗಿ ಹೇಳಿದರೆ ಸಾಲದು ಅದರ ಪೂರಕವಾಗಿ ಅಧಿಕಾರಿಗಳು ಹಾಗೂ ಸರ್ಕಾರ ಪಾರದರ್ಶಕತೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಈಗಾಗಲೇ ಕೆಲವೊಂದು ತಾಲ್ಲೂಕುಗಳಲ್ಲಿ ರಸಗೊಬ್ಬರ ಹಾಗೂ ಬೀಜ ವಿತರಣೆಯಲ್ಲಿ ಸಂಪೂರ್ಣ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಅಲ್ಲದೆ ತಮಗೆ ಬೇಕಾದವರಿಗೆ ದಾಸ್ತಾನು ಪೂರೈಕೆ ಮಾಡುವುದಲ್ಲದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಇದು ತರವಲ್ಲ ಇದು ಕೂಡಲೇ ಸರಿಪಡಿಸಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತ ಸಂಘದ ಸದಸ್ಯರಾದ ಕರಿಯಪ್ಪ,ಮಲ್ಲಿಕಾರ್ಜುನ್, ದೊಡ್ಡಪ್ಪ, ಶರಣಬಸವ, ಶಿವರೆಡ್ಡಿ, ಹುಸೇನ್ ಸಾಬ್, ಕಲ್ಲಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here