ಸುರಪುರ: ಮುಖ್ಯಂಮತ್ರಿ ಬಿ.ಎಸ್.ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃಧ್ಧಿ ನಿಗಮವನ್ನು ಘೋಷಣೆ ಮಾಡಿದ್ದಕ್ಕೆ ಸುರಪುರ ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಹಾಗು ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಹರ್ಷಾಚರಣೆ ಆಚರಿಸಲಾಯಿತು.
ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಬಳಿಯಲ್ಲಿನ ಬಸವೇಶ್ವರ ವೃತ್ತದಲ್ಲಿ ಸೇರಿದ ಅನೇಕ ಜನ ಮುಖಂಡರು ಹಾಗು ಕಾರ್ಯಕರ್ತರು ಬಸವೇಶ್ವರರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ರಾಜ್ಯದಲ್ಲಿ ಸುಮಾರು ಒಂದು ಕೋಟಿಗು ಅಧಿಕ ಸಂಖ್ಯೆಯ ವೀರಶೈವ ಲಿಂಗಾಯತ ಸಮುದಾಯದ ಜನರಿದ್ದು ಅದರಲ್ಲಿ ತೀರಾ ಹಿಂದುಳಿದಿರುವವರ ಸಂಖ್ಯೆ ಹೆಚ್ಚಿದೆ,ಈ ಎಲ್ಲಾ ಸಮುದಾಯದ ಜನರ ಅಭೀವೃಧ್ಧಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರು ಅಭೀವೃಧ್ಧಿ ನಿಗಮ ಘೋಷಣೆ ಮಾಡಿರುವುದು ಸಂತೋಷದ ಸಂಗತಿಯಾಗಿದೆ.ಈ ಕಾರಣಕ್ಕಾಗಿ ಸರಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂಧನೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಮಹಾತ್ಮ ಗಾಂಧಿ ವೃತ್ತಕ್ಕೆ ತೆರಳಿ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮುಖಂಡರಾದ ಬಸವರಾಜ ಜಮದ್ರಖಾನಿ ಜಿ.ಎಸ್.ಪಾಟೀಲ್,ಹೆಚ್.ಸಿ.ಪಾಟೀಲ್ ಮಲ್ಲಣ್ಣ ಸಾಹು ಶಾಂತರಾಜ ಬಾರಿ ಮಂಜುನಾಥ ಜಾಲಹಳ್ಳಿ ಪ್ರಕಾಶ ಅಂಗಡಿ ಪ್ರದೀಪ ಕದರಾಪುರ ಚಂದ್ರಶೇಖರ ಡೊಣುರ ವಿರೇಶ ಪಂಚಾಂಗಮಠ ಮಹೇಶ ಪಾಟೀಲ್ ಶರಣು ಮುಧೋಳ ಜಗದೀಶ ಪಾಟೀಲ್ ದೇವಿಂದ್ರಪ್ಪಗೌಡ ಮಾಲಗತ್ತಿ,ಮಲ್ಲು ಬಾದ್ಯಾಪುರ ರವಿಕುಮಾರ ಹೆಮನೂರ ಸಿದ್ದನಗೌಡ ಹೆಬ್ಬಾಳ ಮಲ್ಲಿಕಾರ್ಜುನ ರಡ್ಡಿ ಅಮ್ಮಾಪುರ ಬಸ್ಸಯ್ಯಸ್ವಾಮಿ ಬೋನಾಳ ರಾಜು ಗುಡೂರ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…