ಸುರಪುರ ಉಪ ವಿಭಾಗದಲ್ಲಿ ಅಸ್ಪೃಶ್ಯತೆ ಆಚರಣೆಗೆ ಅವಕಾಶ ನೀಡುವುದಿಲ್ಲ: ವೆಂಕಟೇಶ ಹುಗಿಬಂಡಿ

ಸುರಪುರ: ಯಾರಿಗಾದರು ಸುರಪುರ ಉಪ ವಿಭಾಗದಲ್ಲಿ ಅಸ್ಪೃಶ್ಯತೆ ಆಚರಣೆ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಿ,ಯಾವುದೇ ಕಾರಣಕ್ಕೂ ಅಸ್ಪೃಶ್ಯತೆ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಸುರಪುರ ಉಪ ವಿಭಾಗದ ಉಪ ಅಧೀಕ್ಷಕ ವೆಂಕಟೇಶ ಹುಗಿಬಂಡಿ ಮಾತನಾಡಿದರು.

ಯಾದಗಿರಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಸುರಪುರ ಉಪ ವಿಭಾಗ ಮಟ್ಟದ ದಲಿತ ದಿನಾಚರಣೆಯ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿ,ಯಾವುದೇ ಗ್ರಾಮದಲ್ಲಿ ದಲಿತರಿಗೆ ತೊಂದರೆ ಮಾಡಿದರೆ ತಿಳಿಸಿ,ಅಲ್ಲದೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಾಗ ತಡ ಮಾಡದೆ ದೂರು ಸ್ವೀಕರಿಸಲಾಗುವುದು,ಇನ್ನು ಬುದ್ಧ ವಿಹಾರದ ಬಳಿಯಲ್ಲಿನ ಅಕ್ರಮ ಚಟುವಟಿಕೆ ನಡೆಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದಕ್ಕು ಮುನ್ನ ಅನೇಕ ಜನ ದಲಿತ ಸಂಘಟನೆಗಳ ಮುಖಂಡರು ಮಾತನಾಡಿ,ಕೆಂಭಾವಿ ಮತ್ತು ಹುಣಸಗಿ ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸಲು ವಿಳಂಭ ಮಾಡುವುದಾಗಿ ಅಲ್ಲದೆ ಅರಕೇರಾ ಜೆ ಗ್ರಾಮದಲ್ಲಿನ ದಲಿತರ ಮೇಲೆ ಹಲ್ಲೆ ನಡೆಯುವದಕ್ಕೆ ಪಡಿವಾಣ ಹಾಕುವಂತೆ ಮತ್ತು ಗೋಲ್ಡನ್ ಕೇವ್ ಗವಿ ಬುದ್ಧ ವಿಹಾರದ ಬಳಿಯಲ್ಲಿ ಪುಂಡರ ದಾಂಧಲೆ ಹಾಗು ಅಕ್ರಮ ಚಟುವಟಿಕೆ ನಡೆಸುವುದನ್ನು ತಡೆಯುವಂತೆ ಹಾಗು ನಗರದ ಬಸ್ ನಿಲ್ದಾಣ ಬಳಿಯಲ್ಲಿನ ಡಾ:ಬಿ.ಆರ್.ಅಂಬೇಡ್ಕರ ಮೂರ್ತಿ ಸುತ್ತಲು ಖಾಸಗಿ ವಾನಗಳ ನಿಲುಗಡೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಸುರಪುರ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ಹುಣಸಗಿ ವೃತ್ತ ನಿರೀಕ್ಷಕ ದೌಲತ್ ಎನ್.ಕೆ ಶ್ರೀನಿವಾಸ ಅಲ್ಲಾಪುರ ಹಾಗು ಉಪ ವಿಭಾಗದ ಎಲ್ಲಾ ಪಿಎಸ್‌ಐಗಳು ಹಾಗು ದಲಿತ ಸಂಘಟನೆಗಳ ಮುಖಂಡರಾದ ರಮೇಶ ದೊರೆ ಆಲ್ದಾಳ ವೆಂಕಟೇಶ ಬೇಟೆಗಾರ ನಾಗಣ್ಣ ಕಲ್ಲದೇವನಹಳ್ಳಿ ರಾಹುಲ್ ಹುಲಿಮನಿ ವೆಂಕೋಬ ದೊರೆ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಮಾಳಪ್ಪ ಕಿರದಹಳ್ಳಿ ಭೀಮಾಶಂಕರ ಬಿಲ್ಲವ್ ಶಿವಲಿಂಗ ಹಸನಾಪುರ ದಾನಪ್ಪ ಲಕ್ಷ್ಮೀಪುರ ದುರ್ಗಪ್ಪ ನಾಗರಾಳ ಬಸವರಾಜ ಮುಷ್ಠಳ್ಳಿ ನಿಂಗಣ್ಣ ಗೋನಾಲ ರಾಯಪ್ಪ ಸಾಲಿಮನಿ ದೇವಿಂದ್ರಪ್ಪ ಕೆಂಭಾವಿ ಶರಣು ಅನಪುರ ಅಶೋಕ ಗೋಗಿ ರಾಮಚಂದ್ರ ವಾಗಣಗೇರಾ ರಾಮಣ್ಣ ಶೆಳ್ಳಿಗಿ ಗೋಪಾಲ ವಜ್ಜಲ ಮರೆಪ್ಪ ಜಾಲಿಬೆಂಚಿ ಭೀಮರಾಯ ಕಡಿಮನಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420