ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಐತಿಹಾಸಿಕ ನಿರ್ಧಾರ : ಮತ್ತಿಮಡು

0
134

ಶಹಾಬಾದ:ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ನೀಡಿರುವ ಆದೇಶ ಸ್ವಾಗತಾರ್ಹವಾದುದು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಅಲ್ಲದೇ ಈ ಸಮುದಾಯದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದರಿಂದ, ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಿರುವುದು ಸಂತೋಷ ತಂದಿದೆ.ಅಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪನವರ ಇದೊಂದು ಐತಿಹಾಸಿಕ ನಿರ್ಧಾರ. ಇದರಿಂದ ವೀರಶೈವ ಲಿಂಗಾಯತ ಸಮಾಜದ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ತಿಳಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here