ಅಧಿಕಾರದ ಅವಧಿಯಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಳ್ಳಿ-ಪ್ರಿಯಾಂಕ್ ಖರ್ಗೆ

0
75

ಶಹಾಬಾದ:ನಗರಸಭೆಯ ನೂತನ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ ಮೆಹಬೂಬ ಹಾಗೂ ಕಾಂಗ್ರೆಸ್ ಮುಖಂಡರ ನಿಯೋಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಬೇಟಿ ಮಾಡಿ ಸನ್ಮಾನಿಸಿ, ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ನಗರಸಭೆಯಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದು, ಅದರ ಸದುಪಯೋಗಪಡಿಸಿಕೊಂಡು ನಗರದ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ನೀಡಿ. ನಗರಸಭೆಯ ಅಧಿಕಾರವನ್ನು ಪಕ್ಷ ತಮಗೆ ನೀಡಿದ್ದು, ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಕೆಲಸವಾಗಬೇಕು.ಜನಪರವಾದ ಆಡಳಿತ ನೀಡಿದರೇ, ಜನರು ತಮ್ಮನ್ನು ಹಾಗೂ ನಮ್ಮ ಪಕ್ಷವನ್ನು ಗುರುತಿಸಿ ಬೆಂಬಲಿಸುತ್ತಾರೆ. ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಳ್ಳುವುದು ತಮ್ಮ ಆದ್ಯ ಕರ್ತವ್ಯ.ಅಲ್ಲದೇ ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಕೇಳಿ ನಿರ್ಧಾರ ತೆಗೆದುಕೊಳ್ಳಿ.ಅಲ್ಲದೇ ನಗರದಲ್ಲಿ ಯಾವ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿವೆ ಎಂಬುದನ್ನು ತಿಳಿಸಿ,ಅದನ್ನು ಪ್ರಾರಂಬಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೆದಾರ, ಮುಖಂಡ ವಿಜಯಕುಮಾರ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಶರಣಗೌಡ ಪಾಟೀಲ ಗೋಳಾ, ಕುಮಾರ ಚವ್ಹಾಣ, ಹಾಷಮ್ ಖಾನ ಸೇರಿದಂತೆ ನಗರಸಭೆಯ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here