ಬಿಜೆಪಿ ಬಡವರ ಪಕ್ಷ: ಬಿ. ಜಯ ಸಿಂಗ್

0
80

ಕಲಬುರಗಿ: ಬಿಜೆಪಿ ಪಕ್ಷ ಬಡವರ ಪರವಾದ ಯೋಜನೆಗಳನ್ನು ರೂಪಿಸುವ ಮೂಲಕ ಸಾಮಾನ್ಯರ ನಾನಾ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿ ಪಕ್ಷವು ಬಡವರ ಪಕ್ಷವಾಗಿದೆ ಎಂದು ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಬಿ. ಜಯ ಸಿಂಗ್ ಹೇಳಿದರು.

ಬಿಜೆಪಿ ಮುಖಂಡರಾದ ಚಂದು ಪಾಟೀಲ್ ಮಾರ್ಗದರ್ಶನದಲ್ಲಿ ಪತ್ರಿಕೆ ಹೇಳಿಕೆ ನೀಡಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ನವರು ಜನರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜಿಲ್ಲೆಯ ಕ್ಷೇತ್ರದ ಅಭಿವೃದ್ಧಿಗೂ ರಾಜ್ಯ ಸರ್ಕಾರ ಕೋಟಿಗಟ್ಟಲೇ ಅನುದಾನವನ್ನು ಮಂಜೂರು ಮಾಡುತ್ತಿದೆ.

Contact Your\'s Advertisement; 9902492681

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಎನ್ನದೇ ಆದ ಛಾಪು ಮೂಡಿಸಿದ್ದಲ್ಲದೇ , ಬಿಜೆಪಿ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರ ನೋವು , ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಪ್ರಿಯ ಯೋಜನೆಗಳ ಮೂಲಕ ಜನಸಾಮಾನ್ಯರಲ್ಲಿ ನೆಲೆಸಿವೆ.ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ , ಜೆಡಿಎಸ್ ಪಕ್ಷವಂತು ಆಟಕ್ಕುಂಟು ಲೆಕ್ಕಕಿಲ್ಲದಂತಾಗಿದೆ.

ಈಗೇನಿದ್ದರೂ ರಾಜ್ಯದಲ್ಲಿ ಬಿಜೆಪಿ ಪಕ್ಷದೇ ಹವಾ. ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಗೆಲುವು ಬಿಜೆಪಿ ಅಭ್ಯರ್ಥಿಗಳದ್ದೇ ಆಗಲಿದೆ ಎಂದು ಭರವಸೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here