ಧಾರವಾಡ: ಈ ವೇಳೆ ಮಾತನಾಡಿ ಸುಮಾರು 10 ವರ್ಷಗಳಿಂದ ಪಿಂಜಾರ ಸಮುದಾಯದಿಂದ ಹೋರಾಟ ಮಾಡುತ್ತಾ ಬಂದರು ನಮ್ಮ ಸಮುದಾಯಕ್ಕೆ ನ್ಯಾಯ ಸಿಗುತ್ತಿಲ್ಲ. ಇತ್ತೀಚಿಗೆ ಮರಾಠ ಹಾಗೂ ಬಹುಸಂಖ್ಯಾತರ ವೀರಶೈವ ಲಿಂಗಾಯತ ನಿಗಮಕ್ಕೂ ಹೆಚ್ಚಿನ ಒತ್ತು ನೀಡಿದೆ. ಇದೇ ರೀತಿ ಪಿಂಜಾರ ಅಭಿವೃದ್ದಿ ನಿಗಮಕ್ಕೂ ಆದೇಶ ನೀಡಬೇಕು ಇಲ್ಲಾದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಅಬ್ದುಲರಝಾಕ ನದಾಫ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಪಿಂಜಾರ ಅಭಿವೃದ್ದಿ ನಿಗಮಕ್ಕೆ ಒತ್ತಾಯಿಸಿ ಮಾತನಾಡಿ, ಪಿಂಜಾರ ಅಭಿವೃದ್ದಿ ನಿಗಮಕ್ಕೆ ಹೋರಾಟ ಮಾಡುತ್ತಾ ಬಂದರು ಸಹ ಇಲ್ಲಿಯವರಿಗೂ ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವುದಾದರೂ ಏಕೆ ? ಇದನ್ನು ನಮ್ಮ ಸಮುದಾಯದಿಂದ ತೀವೃವಾಗಿ ಖಂಡಿಸುತ್ತೇವೆಂದು ಹೇಳಿದರು.
ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯ ಅರ್ಧದಷ್ಟು ಪಿಂಜಾರ ನದಾಫ, ಮನ್ಸೂರಿ, ದುದೇಕುಲಾ ಸಮುದಾಯವಿದ್ದು ಈವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಬ್ಯಗಳಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಅಲೆಮಾರಿ ಪಿಂಜಾರ್, ನದಾಫ್, ಜನಸಂಖ್ಯೆಗೆ ಸದ್ಯ ಪ್ರ ವರ್ಗ-1 ಕ್ಕೆ ಮೀಸಲಾತಿ ಸೌಲಬ್ಯಗಳು ರಾಜ್ಯದಲ್ಲಿ ಎಲ್ಲ ಜಿಲ್ಲೆಯಲ್ಲಿ ಸಿಗುತ್ತಿಲ್ಲ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದ ಈ ಸಮುದಾಯದ ವಾಸ್ತವ ಸ್ಥಿತಿಯನ್ನು ಹಿಂದುಳಿದ ವರ್ಗಗಳ ಆಯೋಗವು 2010 ರಲ್ಲಿ ಡಾ.ಸಿ.ಎಸ್. ದ್ವಾರಕನಾಥ ರವರು ಸಲ್ಲಿಸಿದ ವರದಿಯಲ್ಲಿ ತೆರೆದಿಟ್ಟಿದೆ. ಪಿಂಜಾರ/ನದಾಫ್ ಸಮುದಾಯದ ಉಳಿವು ಮತ್ತು ಬೆಳವಣಿಗೆಗೆ ಪಿಂಜಾರ/ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಅನಿವಾರ್ಯ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
ಪಿಂಜಾರ ಅಭಿವೃದ್ದಿ ನಿಗಮದಿಂದ ಸಮುದಾಯದ ಆರ್ಥಿಕ ಪರಿಸ್ಥಿತಿ ಸುದಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆಂದು ಆಶಯ ವ್ಯಕ್ತಪಡಿಸಿದರು. ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ವತಿಯಿಂದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಇವರ ಮುಕಾಂತರ ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪ್ರಮುಖರು ಮನವಿ ನೀಡಿದರು.
ಜಿಲ್ಲಾ ಅಧ್ಯಕ್ಷ ಮಹಮ್ಮದ್ ಗೌಸ್ ಪಿಂಜಾರ್, ನಬಿಸಾಬ್ ನದಾಫ್, ನ್ಯಾಯವಾದಿ ಬಿ. ಕೆ ನದಾಫ್, ಎಂ ಕೆ ನದಾಫ್, ಬಸಿರಾ ತೀರಲಾಪುರ, ಮಹಮ್ಮದ್ ಶರೀಪ್ ನದಾಫ್, ಗೌಸಸಾಬ್ ಡಿ ನದಾಫ್, ಶಕೀಲ್ ಗೊರವನಕೊಳ್ಳ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಹಜರತಸಾಬ್ ನದಾಫ್, ನಾಹೀಮ್ ನದಾಫ್, ಅನ್ವರ್ ನದಾಫ್, ಜಾವಿದ್ ನದಾಫ್ ರಾಜು ಕೊಣ್ಣೂರ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…