ಬಿಸಿ ಬಿಸಿ ಸುದ್ದಿ

ಹೊನಗುಂಟಾ ಗ್ರಾಮಲೇಖಪಾಲಕನನ್ನು ವರ್ಗಾವಣೆ ಮಾಡಲು ಮನವಿ

ಶಹಾಬಾದ:ಹೊನಗುಂಟಾ ಗ್ರಾಮಲೇಖಪಾಲಕ ಹಣಮಂತರಾಯ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಶುಕ್ರವಾರ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಒಕ್ಕೂಟದ ತಾಲೂಕಾ ಸಂಚಾಲಕ ಪೂಜಪ್ಪ ಮೇತ್ರೆ,ಈಗಾಗಲೇ ಭೀಮಾ ಹಾಗೂ ಕಾಗಿಣಾ ನದಿಯ ಪ್ರವಾಹಕ್ಕೆ ಒಳಗಾದ ಸಮೀಕ್ಷೆಯ ಪಟ್ಟಿ ನೀಡಿ ಎಂದು ಕೇಳಿದರೇ, ಅಸಭ್ಯ ವರ್ತನೆ ತೋರುತ್ತಾರೆ. ಅಲ್ಲದೇ ಸಂಘಟನೆ ವತಿಯಿಂದ ಮನವಿ ಮಾಡಿ ಸುಮಾರು ಹದಿಮೂರು ದಿನಗಳ ನಂತರ ಮತ್ತೆ ಬಂದು ಕೇಳಿದರೇ , ಏಕವಚನದಲ್ಲಿ ಏನು ಮಾಡಕೋತ್ತಿರಿ, ಮಾಡಕೋರಿ ಎಂದು ಎಂದು ಮಾತನಾಡುತ್ತಿದ್ದಾರೆ.ಗ್ರಾಮದ ಜನರು ಈಗಾಗಲೇ ಪ್ರವಾಹದಿಂದ ನಲುಗಿ ಹೋಗಿದ್ದಾರೆ.ಅಂತಹ ಅರ್ಹ ಫಲಾನುಭವಿಗಳಿಗೆ ಪರಿಹಾರ ಧನ ನೀಡಿಲ್ಲ. ಸಮೀಕ್ಷೆ ನಡೆಸಿದ ಒಂದು ಪಟ್ಟಿ ನೀಡಲು ಆಗುತ್ತಿಲ್ಲ.ಅಲ್ಲದೇ ಸಭ್ಯವಾಗಿ ಮಾತನಾಡಲು ಗೊತ್ತಿಲ್ಲದ ಒಬ್ಬ ಗ್ರಾಮ ಲೇಖಪಾಲಕ ನಮ್ಮೂರಿಗೆ ಬೇಕಿಲ್ಲ.ಇಂತಹ ಒಬ್ಬ ವ್ಯಕ್ತಿಯಿಂದ ಇಡೀ ಕಂದಾಯ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ.ಆದ್ದರಿಂದ ಕೂಡಲೇ ಇವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಒಕ್ಕೂಟದ ಸಂಘಟನಾ ಸಂಚಾಲಕ ಶರಣಬಸಪ್ಪ.ಎಮ್,ರಾಘವೇಂದ್ರ ಗುಡೂರ್, ಮಲ್ಲಿಕಾಜರ್ುನ, ಸಂತೋಷ ಹಾದಿಮನಿ, ಮರೆಪ್ಪ ಮೇತ್ರೆ, ಮೈಲಾರಿ, ನಾಗಪ್ಪ ನ್ಯಾವಿನಿ ಇತರರು ಇದ್ದರು.

emedia line

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

32 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

35 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

38 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago