ಬಿಸಿ ಬಿಸಿ ಸುದ್ದಿ

ಮರಾಠರು ಕನ್ನಡಿಗರೇ , ಕನ್ನಡ ವಿರೋಧಿಗಳಲ್ಲ: ರಮೇಶ ಪೂಜಾರಿ

ಕಲಬುರಗಿ: ಮರಾಠರು ಕನ್ನಡಿಗರೇ ಆಗಿದ್ದಾರೆ. ಅವರು ಎಂದಿಗೂ ಕನ್ನಡ ವಿರೋಧಿಗಳಲ್ಲ . ಆದರೆ, ಕೆಲವರು ಮರಾಠರನ್ನು ಕರ್ನಾಟಕದಿಂದ ಓಡಿಸಿ ಎಂಬ ಹೇಳಿಕೆ ನೀಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾ ಕಾರ್ಯದ್ಯಕ್ಷರಾದ ರಮೇಶ ಪೂಜಾರಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು , ಬೆಳಗಾವಿಯ ಯಾವುದೋ ಮೂಲೆಯಲ್ಲಿ ಎಂಇಎಸ್ ನ ಪುಂಡರು ಮಾಡುವ ಚೇಷ್ಟೆಗೆ ಇಡೀ ಮರಾಠ ಸಮುದಾಯವನ್ನು ಕೇವಲವಾಗಿ ಕಾಣುವುದು ಯಾವ ನ್ಯಾಯ. ಅದಕ್ಕಾಗಿ ಕನ್ನಡಪರ ಸಂಘಟನೆಯವರು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಆಗಬಾರದು. ಮರಾಠರು ಕನ್ನಡಿಗರೇ ಆಗಿದ್ದಾರೆ ಎನ್ನುವುದನ್ನು ಮೊದಲು ಅರಿತುಕೊಳ್ಳಬೇಕು ಎಂದರು.

ಮರಾಠ ಅಭಿವೃದ್ಧಿ ನಿಗಮ ರಚಿಸಿದ್ದರಿಂದ ಕೆಲ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡ ಹೋರಾಟಗಾರ ವಾಟಾಳ ನಾಗರಾಜ ರವರು ಡಿ.5 ರಂದು ಕರ್ನಾಟಕ ಬಂದ ಗೆ ಕರೆ ನೀಡಲು ಮುಂದಾಗಿದ್ದಾರೆ. ಅವರು ಸಮಗ್ರ ಕರ್ನಾಟಕದ ಮರಾಠರು. ಅವರ ಮೇಲೆ ಏಕೆ ಕಳಂಕ ಹೊರಸುತ್ತಿದ್ದಾರೆ ಎಂಬುದು ಅವರಿಗೆ ತಿಳಿಯುತ್ತಿಲ್ಲ. ಮರಾಠ ಸಮಾಜವು ಕನ್ನಡ ನಾಡು ನುಡಿಯಲ್ಲಿ ಕನ್ನಡ ಮರಾಠರಾಗಿ ಈ ನೆಲದಲ್ಲಿ ವಂಶಪಾರಂಪರೆಯಾಗಿ ಅವರು ಬದುಕು ನಡೆಸುತ್ತಿದ್ದಾರೆ.

ಬೀದರದ ಅನುಭವ ಮಂಟಪದಿಂದ ಮೈಸೂರಿನ ಬನ್ನಿ ಮಂಟಪದವರೆಗೂ , ವಿಜಯನಗರದಿಂದ ಕಿತ್ತೂರು ನಾಡಿನವರೆಗೂ , ಬೆಳಗಾವಿಯಿಂದ ಬೆಂಗಳೂರಿನವರೆಗೂ , ಕೋಲಾರ ಚಿನ್ನದ ಗಣಿಯಿಂದ ಕಾರವರವರೆಗೂ , ಕರ್ನಾಟಕದ ವಿಸ್ತೃತ ಪ್ರದೇಶದಲ್ಲಿ ಮರಾಠರು ಶತಮಾನಗಳಿಂದ ವಾಸಿಸುತ್ತಿದ್ದಾರೆ. ಕನ್ನಡತನದಿಂದ ಬಾಳ್ವೆ ಮಾಡುತ್ತಿದ್ದಾರೆ ಈ ನಿಟ್ಟಿನಲ್ಲಿ ಕನ್ನಡಪರ ಸಂಘಟನೆಗಳು ಯಾವುದೇ ರೀತಿಯ ಬಂದ ಗೆ ಅವಕಾಶ ನೀಡಬಾರದು ಎಂದರು.

ಮಹಾರಾಷ್ಟ್ರದ ಗೃಹ ಸಚಿವ ಅಜಿತ ಪವಾರ ಹೇಳಿಕೆ ನೀಡಿರುವುದು ಖಂಡನೀಯ ನೆಲ, ಜಲ, ಭಾಷೆ ವಿಚಾರ ಬಂದರೆ ಮಹಾರಾಷ್ಟ್ರದವರಿಗೆ ಕರ್ನಾಟಕದ ಒಂದು ಇಂಚು ಜಾಗವನ್ನು ಕೂಡಾ ಅವರಿಗೆ ಬಿಡುವುದಿಲ್ಲ. ಬೆಳಗಾವಿ ನಿಪ್ಪಾಣಿ ಎಂದಿಗೂ ಕರ್ನಾಟಕದೇ ಆಗಿದೆ. ಅದನ್ನು ಉಳಿಸಿಕೊಳ್ಳಲು ಅವರು ಎಲ್ಲದಕ್ಕೂ ಸಿದ್ದರಿದ್ದಾರೆ ಎಂದರು.

sajidpress

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

10 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

11 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

11 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

11 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

12 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

12 hours ago