ಇಂದು ಪೂಜ್ಯ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿಯವರ 51ನೇ ಹುಟ್ಟುಹಬ್ಬ ಸಂಭ್ರಮಾಚರಣೆ

0
53

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಸಮಾವೇಶ ಸಭಾಂಗಣದಲ್ಲಿ ಭಾನುವಾರ ನ.೨೨ರಂದು ಬೆಳಗ್ಗೆ ೧೧.೩೦ಕ್ಕೆ ಪೂಜ್ಯ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿಯವರ ೫೧ನೇ ಹುಟ್ಟುಹಬ್ಬ ನಿಮಿತ್ತ ಮಾತೋಶ್ರೀ ಅವ್ವಾಜಿಯವರ ಹೆಸರಿನ ವಿಶೇಷ ಅಂಚೆ ಚೀಟಿ ಹಾಗೂ ಲಕೋಟೆ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ.

ವಿದ್ಯಾಭಂಡಾರಿ ಪೂಜ್ಯ ಡಾ ಶರಣಬಸವಪ್ಪ ಅಪ್ಪಾಜೀಯವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.ಕಲಬುರಗಿ ಉತ್ತರ ವಲಯದ ವಿಧಾನ ಸಭಾ ಸದಸ್ಯರಾದ ಖನೀಜ್ ಫಾತೀಮಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗುಲ್ಗರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪಾಧ್ಯಾಪಕರಾದ ಡಾ. ಜಯಶ್ರೀ ದಂಡೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

Contact Your\'s Advertisement; 9902492681

ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜೀಯವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಸ್. ಪಾಟೀಲ ಅವರು ಸಂಪಾದಿಸಿದ ’ಮಹಾದಾಸೋಹಿಗಳು’ ಎಂಬ ಗ್ರಂಥ ಲೋಕಾರ್ಪಣೆಗೊಳ್ಳಲಿದೆ.

ಮುಖ್ಯ ಅತಿಥಿಗಳಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ್ ವಿ. ನಿಷ್ಠಿ ಅಧ್ಯಕ್ಷತೆ ವಹಿಸಲಿದ್ದು, ವಿವಿಯ ಎಲ್ಲ ವಿಭಾಗದ ಡೀನ್‌ರು ಹಾಗೂ ಮುಖ್ಯಸ್ಥರುಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here