ಕಲೆಯಿಂದ ಧರ್ಮ, ಸಂಪ್ರದಾಯ ಜೀವಂತಗೊಳಿಸಲು ಸಾಧ್ಯ: ಡಾ. ಗಣೇಶ ತರತರೆ

ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಲೆಯನ್ನು ಅನ್ವಯಿಸಿಕೊಂಡಾಗ ನಮ್ಮ ಧರ್ಮ, ಸಂಪ್ರದಾಯವನ್ನು ಜೀವಂತಗೊಳಿಸಲು ಸಾಧ್ಯ ಎಂದು ಮುಂಬೈ ಜೆಜೆ ಶಾಲೆಯ ಪ್ರಾಧ್ಯಾಪಕರಾದ ಡಾ. ಗಣೇಶ ತರತರೆ ಅಭಿಪ್ರಾಯ ಪಟ್ಟರು.

ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜೀ ಹಾಗೂ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾಜಿಯವರ ಜನ್ಮದಿನೋತ್ಸವ ನಿಮಿತ್ತ ಶರಣಬಸವ ವಿಶ್ವವಿದ್ಯಾಲಯ, ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಗೋದುತಾಯಿ ದೊಡ್ಡಪ್ಪ ಅಪ್ಪಾ ಪದವಿ ಕಲಾ ಮತ್ತು ವಾಣೀಜ್ಯ ಪದವಿ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ, ರಾಷ್ಟ್ರೀಯ ಮಟ್ಟದ ಶಿಬಿರ, ವೆಬಿನಾರ್ ಮತ್ತು ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮದ ಪ್ರಧಾನ ವಿಷಯದ ಬಗ್ಗೆ ಆನ್‌ಲೈನ್ ಮೂಲಕ ಮಾತನಾಡಿದ ಅವರು, ಕೌಶಲ್ಯ ಮತ್ತು ಕಲೆಗೆ ಅವಿನಾಭ ಸಂಬಂಧವಿದೆ. ಕೌಶಲ್ಯಗಳಿಲ್ಲದ ಕಲೆಯಿಲ್ಲ. ಕಲೆಯ ಮೂಲಕ ಮಕ್ಕಳಲ್ಲಿ ವಿಶಿಷ್ಟವಾದ ಕೌಶಲ್ಯಗಳನ್ನು ವೃದ್ಧಿಗೊಳಿಸಬಹುದು ಎಂದರು.

ಪ್ರತಿಯೊಬ್ಬರು ಕಲೆಯಿಲ್ಲದೇ ಸಂತೋಷದ ಜೀವನ ಕಳೆಯಲು ಸಾಧ್ಯವಿಲ್ಲ. ಮನುಷ್ಯನಿಗೆ ಕಲೆ ಸಂತೋಷವನ್ನು ತಂದುಕೊಡುತ್ತೆ. ಕಲೆ ಜೀವನದ ವಿಶಿಷ್ಟ ಹಂತಗಳನ್ನು ಪರಿಚಯಿಸುತ್ತೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿವಿ ಕುಲಸಚಿವ ಕಾ. ಅನೀಲಕುಮಾರ ಬಿಡವೆ ಮಾತನಾಡಿ, ಕೇವಲ ಯಾವುದೇ ಒಂದು ಕೌಶಲ್ಯದಿಂದ ಉದ್ಯೋಗದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರು ವಿಶಿಷ್ಟವಾದ ಕೌಶಲ್ಯಗಳನ್ನು ಬೆಳಸಿಕೊಂಡಾಗ ಮಾತ್ರ ತಮ್ಮ ವ್ಯಕ್ತಿತ್ವವನ್ನು ಇತರೆ ಕಾರ್ಯಕ್ಷೇತ್ರದಲ್ಲಿ ಸ್ಥಿರಗೊಳಿಸಿಕೊಳ್ಳಲು ಸಾಧ್ಯ ಎಂದರು.

ಹೊಸತನಕ್ಕೆ ಸಮಾಜ ಹೊಂದಿಕೊಳ್ಳುತ್ತದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹೊಸ ಹೊಸ ಆಯ್ಕೆಯ ವಿಷಯಗಳನ್ನು ಸೇರ್ಪಡೆಗೊಳಿಸುವ ಮೂಲಕ ಅವರ ಕಲಿಕೆಯ ಸಾಮರ್ಥ್ಯವನ್ನು ವೃದ್ಧಿಗೊಳಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದರು.
ವಿಭಾಗ ಡೀನ್‌ರಾದ ಡಾ. ಶಾಂತಲಾ ನಿಷ್ಠಿ ಸ್ವಾಗತಿಸಿ, ಕಲೆಯೆಂಬುದು ಮಕ್ಕಳಲ್ಲಿ ಕಲಿಕೆಯ ಅನುಭವ ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ಕ್ರೀಯಾತ್ಮಕ ಚಟುವಟಿಕೆಗಳನ್ನು ವೃದ್ಧಿಗೊಳಿಸುತ್ತದೆ ಮತ್ತು ವಿಶಿಷ್ಟ ಕೌಶಲ್ಯ ಸಾಮರ್ಥ್ಯ ಹೆಚ್ಚಿಸುತ್ತದೆ ಎಂದರು.

ವಿಭಾಗದ ಚೆರ್‌ಪರ್ಸರಾದ ಡಾ. ಸುಬ್ಬಯ್ಯ ಎಂ. ನೀಲಾ ಮಾತನಾಡಿ, ಕಲೆಯನ್ನು ಜನರ ಮನ ಮುಟ್ಟಿಸುವ ಉದ್ದೇಶದಿಂದ ಚಿತ್ರಕಲಾ ಶಿಬಿರ, ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ. ಪೂಜ್ಯ ಅಪ್ಪಾಜಿಯವರು ಕಲೆ, ಸಂಗೀತ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಪರಿಣಾಮ ಕಲೆ ವಿಭಾಗದ ಶಿಕ್ಷಣ ಸ್ನಾತಕೋತ್ತರ ಮತ್ತು ಪಿ.ಎಚ್.ಡಿ ಹಂತಕ್ಕೆ ತಲುಪಿದೆ ಎಂದರು.

ಪ್ರೊ. ಗಾಯಿತ್ರಿ ಕಲ್ಯಾಣ ನಿರೂಪಿಸಿದರು. ವಿದ್ಯಾರ್ಥಿ ಮಲ್ಲಿಕಾರ್ಜುನ ವಸ್ತ್ರದ ಮಠ್ ಪ್ರಾರ್ಥನೆ ಗೀತೆ ಹಾಡಿದರು. ಪ್ರ. ವೀಣಾ ಜೆ. ಮಠ ವಂದಿಸಿದರು. ಪ್ರೊ. ಪಂಚಶೀಲಾ ಅಪ್ಪಾ ಹಾಗೂ ಪ್ರೊ. ನಿಜಂಲಿಂಗ ಅತಿಥಿ ಪರಿಚಯ ಮಾಡಿದರು. ವಿವಿ. ಸಮಕುಲಪತಿ ಡಾ. ವಿ.ಡಿ ಮೈತ್ರಿ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

3 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

6 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

11 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

16 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

21 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420