ಕೊರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ

ಬೆಂಗಳೂರು: ಕೊರೋನಾದಿಂದ ವಿಶ್ವದಾದ್ಯಂತ ಆರ್ಥಿಕ ಸಂಕಷ್ಟ ಇದ್ದಾಗ್ಯೂ ಶ್ರೀ ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ 2019-20 ನೇ ಹಣಕಾಸು ಸಾಲಿನಲ್ಲಿ 159.30 ಲಕ್ಷ ರೂಪಾಯಿಗಳ ನಿವ್ವಳ ಲಾಭ ಗಳಿಸಿದೆ.

ಬ್ಯಾಂಕಿನ ಈ ಸಾಧನೆ ಮತ್ತು ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿರುವ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ದ್ವಾರಕನಾಥ್ ಅವರು, “2019-20 ನೇ ಹಣಕಾಸು ಸಾಲಿನಲ್ಲಿ ಬ್ಯಾಂಕು ತನ್ನ 10 ಶಾಖೆಗಳಲ್ಲಿ ಷೇರು ಬಂಡವಾಳ, ಠೇವಣಾತಿಯ ಸಂಗ್ರಹ, ಸದಸ್ಯರಿಗೆ ಸಮಗ್ರ ರೀತಿಯಲ್ಲಿ ಸಾಲಗಳ ವಿತರಣೆ ಮತ್ತು ಹೂಡಿಕೆಗಳ ನಿರ್ವಹಣೆ ಸೇರಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿರುವ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದೆ’’ ಎಂದು ತಿಳಿಸಿದರು.

2020 ರ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡ 2019-20 ನೇ ಸಾಲಿನಲ್ಲಿ ಷೇರು ಬಂಡವಾಳದೊಂದಿಗೆ 4459.65 ಲಕ್ಷ ರೂಪಾಯಿಗಳಷ್ಟು ಸ್ವಂತ ನಿಧಿಯನ್ನು ಕ್ರೋಢೀಕರಿಸಿದೆ ಮತ್ತು 72,417.26 ಲಕ್ಷ ರೂಪಾಯಿಯಷ್ಟು ದುಡಿಯುವ ಬಂಡವಾಳದೊಂದಿಗೆ ಪ್ರಗತಿಪಥದೆಡೆಗೆ ಸಾಗಿದೆ ಎಂದು ಅವರು ಹೇಳಿದರು.

ವಿಶ್ವದಾದ್ಯಂತ ಕೊರೋನಾ ವೈರಸ್ ನ ಪರಿಣಾಮದಿಂದ ತೀವ್ರ ಸಂಕಷ್ಟ ಎದುರಾಗಿದೆ. ಆರ್ಥಿಕ ಕ್ಷೇತ್ರದ ಮೇಲೆ ಇದರ ಪರಿಣಾಮ ಸಾಕಷ್ಟು ಆಗಿದೆ. ಆದರೆ, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ನಮ್ಮ ಬ್ಯಾಂಕ್ 1,59,30,000 ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿರುವುದು ನಮಗೆಲ್ಲರಿಗೂ ಸಂತಸವನ್ನುಂಟು ಮಾಡಿದೆ ಎಂದರು.

ಬ್ಯಾಂಕಿನ ಈ ಅಭೂತಪೂರ್ವವಾದ ಸಾಧನೆಗೆ ನಮ್ಮ ನೆಚ್ಚಿನ ಗ್ರಾಹಕರು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಅಧಿಕಾರಿಗಳು ಮತ್ತು ಹಿತೈಷಿಗಳು ಕಾರಣರಾಗಿದ್ದಾರೆ. ಅವರಿಗೆ ನಮ್ಮ ಬ್ಯಾಂಕಿನ ವತಿಯಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420