ಶಹಾಬಾದ:ರಕ್ತದಾನ ಅತ್ಯಂತ ಶ್ರೇಷ್ಠ ದಾನ.ರಕ್ತವನ್ನು ನೀಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು.ಆ ತೃಪ್ತಿಯೂ ನಮಗೆ ಸಿಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಹೇಳಿದರು.
ಅವರು ಸೋಮವಾರ ಮದರ್ ತೆರೆಸಾ ಫೌಂಡೇಶನ ವತಿಯಿಂದ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪುಣ್ಯ ಪುರುಷರ ಜಯಂತಿ ಮತ್ತು ಇತರ ವಿಶೇಷ ದಿನಗಳಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಸಂಕಷ್ಟದಲ್ಲಿರುವ ಬಡರೋಗಿಗಳಿಗೆ ಸ್ಪಂದಿಸಲು ಮುಂದಾದರೇ ಅದಕ್ಕಿಂತ ಹೆಚ್ಚಿನ ತೃಪ್ತಿ ಬದುಕಿನಲ್ಲಿ ಮತ್ತೊಂದಿಲ್ಲ ಎಂದು ಹೇಳಿದರು.
ಮದರ್ ತೆರೆಸಾ ಫೌಂಡೇಶನನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ನಸರತ್ ಬೇಗಂ ಮಾತನಾಡಿ, ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯ ಚೆನ್ನಾಗಿರುವುದಲ್ಲದೇ, ಸಾಯುವ ಅಂಚಿನಲ್ಲಿರುವ ವ್ಯಕ್ತಿಗೆ ಬದುಕನ್ನು ನೀಡಬಲ್ಲದು.ಆದ್ದರಿಂದ ರಕ್ತದಾನ ಶಿಬಿರ ಯಸಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ ಎಂದು ಹೇಳಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್, ಜೆಡಿಎಸ್ ಅಧ್ಯಕ್ಷ ರಾಜ ಮಹ್ಮದ ರಾಜಾ, ಡಾ.ಅಸ್ಲಾಂ ಪಾಷಾ, ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಸಯ್ಯದ್ ಅಬ್ದುಲ್ ರೆಹಮಾನ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ, ನವೀನಕುಮಾರ, ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದಶರ್ಿ ಶೇಖ ಚಾಂದ ಪಾಷಾ, ಸಂಘಟಕರಾದ ಮದರ ತೆರೆಸಾ ಫೌಂಡೇಶನ ಜಿಲ್ಲಾಧ್ಯಕ್ಷ ಮಹ್ಮದ್ ರಿಯಾಜ ಜಮಾದಾರ, ಮಹ್ಮದ್ ಶೇರ ಖಾಜಿ,ಹಫೀಜ್ ಶೋಯೆಬ, ಶೇಖ ಸದ್ದಮ್ ಅನ್ವರಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…