ವೈದ್ಯಕೀಯ ಪರೀಕ್ಷೆ ಮುಂದೂಡಲು ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಲಬುರಗಿ: ವೈದ್ಯಕೀಯ ಶಿಕ್ಷಣ ಸಚಿವರು ಡಿಸೆಂಬರ್ ೧ ರಿಂದ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. ಕಳೆದ ೮ ತಿಂಗಳಿನಿಂದಲೂ ದೇಶದೆಲ್ಲೆಡೆ ಜನಸಾಮಾನ್ಯರು, ವಿದ್ಯಾರ್ಥಿಗಳು ಕೊರೋನ ಸಾಂಕ್ರಾಮಿಕಕ್ಕೆ ತುತ್ತಾಗಿ, ಆರ್ಥಿಕವಾಗಿ ನಲುಗಿ ಹೋಗಿರುವ ಸಂದರ್ಭದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಓ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಆಗ್ರಹಿಸಿದ್ದಾರೆ.

ಈ ಕುರಿತು ರಾಜ್ಯದ್ಯಂತ ವಿರೋಧ ವ್ಯಕ್ತಪಡಿಸಿ ಕೆಲವು ಕಾಲೇಜುಗಳಲ್ಲಿ ಡೀನ್ ಹಾಗೂ ಪ್ರಾಂಶುಪಾಲರನ್ನು ಭೇಟಿ ಮಾಡಿ ಮನವಿ ಪತ್ರವನ್ನು ನೀಡಲಾಯಿತು. ಅಂತೆಯೇ, ಬೇಡಿಕೆಗಳ ಫಲಕವನ್ನು ಹಿಡಿದು ವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಆನ್ ಲೈನ್ ಚಳುವಳಿಯಲ್ಲಿ ಭಾಗವಹಿಸಿದರು. ಈ ಹೋರಾಟಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದರು.

ಈ ಕೂಡಲೇ, ತನ್ನ ನಿರ್ಧಾರವನ್ನು ಹಿಂಪಡೆದು, ಪರೀಕ್ಷೆಯನ್ನು ಮುಂದೂಡಬೇಕೆಂದು ನಗರದ ಜಿಲ್ಲಾಧಿಕಾರಿ ಕಛೇರಿ ಎದರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಮೂಲಕ ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧಕ್ಷರಾದ ಹಣಮಂತ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಈರಣ್ಣ ಇಸಬಾ , ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ, ವೈದ್ಯಕೀಯ ವಿದ್ಯಾರ್ಥಿಗಳಾದ ವಿಶಾಲ ದೊಡ್ಡಮನಿ, ಸುಕ್ಷತಾ, ಸಾಯಿಕುಮಾರ ಗೌಡ,ಆಕಾಶ ಪಾಟಿಲ್ ಸದಸ್ಯರಾದ ವೆಂಕಟೇಶ ದೇವದುರ್ಗ, ಭಿಮು ಆಂದೋಲ,ನಾಗರಾಜ ಸೇರಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420