ಕಲಬುರಗಿ: ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯರಾದ ಶ್ರೀ ಅಹಮದ್ ಪಟೇಲ್ ಅವರ ನಿಧನಕ್ಕೆ ಮತ್ತೊಬ್ಬ ಹಿರಿಯ ನಾಯಕರಾದ ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ತಮ್ಮ ಶೋಕ ಸಂದೇಶದಲ್ಲಿ ಶ್ರೀಯುತ ಅಹಮದ್ ಪಟೇಲ್ ಅವರ ಪಕ್ಷ ನಿಷ್ಠೆ ಕೊಂಡಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಂಕಷ್ಟದ ಸಮಯದಲ್ಲಿ ಗಟ್ಟಿಯಾಗಿ ನಿಂತು ಪಕ್ಷವನ್ನು ಮುನ್ನಡೆಸುತ್ತಿದ್ದ ಒಬ್ಬ ಸಮರ್ಥ ನಾಯಕನನ್ನು ಪಕ್ಷ ಹಾಗೂ ಅಸಂಖ್ಯಾತ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಳೆದುಕೊಂಡಿದ್ದಾರೆ ಎಂದಿದ್ದಾರೆ.
ಅಹಮದ್ ಪಟೇಲ್ ಅವರೊಂದಿಗಿನ ಸುಮಾರು ನಾಲ್ಕು ದಶಕಗಳ ತಮ್ಮ ಒಡನಾಟವನ್ನು ನೆನೆಪಿಸಿಕೊಂಡು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಶ್ರೀಯುತ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಆಧಾರ ಸ್ಥಂಬಗಳಲ್ಲಿ ಒಬ್ಬರಾಗಿದ್ದ ಪಟೇಲ್ ಅವರ ಅಕಾಲಿಕ ನಿಧನ ಪಕ್ಷಕ್ಕೆ ಭರಿಸಲಾಗದ ನಷ್ಠವಾಗಿದೆ ಎಂದಿದ್ದಾರೆ.
ಪಕ್ಷದ ಕಾರ್ಯಕರ್ತರ ಸಲುವಾಗಿ ದಿನದ ಬಹುತೇಕ ಸಮಯ ಮೀಸಲಿಡುತ್ತಿದ್ದ ಅವರು ಪಕ್ಷದ ತತ್ವ ಹಾಗೂ ಸಿದ್ದಾಂತದ ಪರಿಪಾಲಕರಾಗಿದ್ದರು. ಅವರ ನಿಧನದ ದುಃಖ ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಕರುಣಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…