ತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಉಗ್ರ ಹೋರಾಟ: ಶಾಂತಲಾ ದಾಮ್ಲೆ

ಬೆಂಗಳೂರು: ಬೆಂಗಳೂರಿನ ಬೃಹತ್ ಸಮಸ್ಯೆಯಾಗಿ, ಮಾಫಿಯಾವಾಗಿ ಬದಲಾಗಿರುವ ತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಸ್ವಾಯತ್ತ ಮಂಡಳಿ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದು. ಈ ನಡೆಯನ್ನು ಆಮ್ ಆದ್ಮಿ ಪಕ್ಷ ವಿರೋಧಿಸುತ್ತದೆ ಎಂದು ಬಿಬಿಎಂಪಿ ಕ್ಯಾಂಪೇನ್ ಉಸ್ತುವಾರಿ, ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಹೇಳಿದರು.

ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾಗುವುದಕ್ಕಿಂತ ಮೊದಲು ಬೆಂಗಳೂರಿನ ಕಸ ನಿರ್ವಹಣೆ ಆರೋಗ್ಯ ಅಧಿಕಾರಿಗಳ ಅಡಿಯಲ್ಲಿ ಬರುತ್ತಿತ್ತು ಆನಂತರ ಇದನ್ನು ಎಂಜಿನಿಯರಿಂಗ್ ವಿಭಾಗಕ್ಕೆ ವರ್ಗಾಯಿಸಲಾಯಿತು, ಇದಾದ ನಂತರ ಕಸದ ಮಾಫಿಯಾ ಕೈಗೆ ಸಿಲುಕಿದ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಇಡೀ ಬೆಂಗಳೂರು ಕಸದ ಕೊಂಪೆಯಾಗಿ ಮಾರ್ಪಟ್ಟಿದೆ ಎಂದರು ಆರೋಪಿಸಿದರು. ಇಡೀ ಸರ್ಕಾರವನ್ನೇ ನಿಯಂತ್ರಣ ಮಾಡುವಷ್ಟು ಬೆಳೆದಿರುವ ಕಸದ ಮಾಫಿಯಾಗಳ ಚಿತಾವಣೆಯಿಂದ ಈ ಕೆಲಸಕ್ಕೆ ಬಿಬಿಎಂಪಿ ಕೈ ಹಾಕಿದೆ. 150 ಕೋಟಿ ವೆಚ್ಚದ ಕಸ ನಿರ್ವಹಣೆ ಬಜೆಟ್ ಈಗಾಗಲೇ 1200 ಕೋಟಿಗೆ ಮುಟ್ಟಿದೆ. ಪ್ರತ್ಯೇಕ ಮಂಡಳಿ ರಚಿಸಿ ಮತ್ತಷ್ಟು ಜನರ ಹಣವನ್ನು ತಿನ್ನುವ ಹುನ್ನಾರ ಎಂದು ಹೇಳಿದರು.

ಪ್ರಸ್ತುತ ಹಲ್ಲು ಕಿತ್ತು ಹಾವಿನಂತಾಗಿರುವ ಬಿಬಿಎಂಪಿ ಯನ್ನು ಮತ್ತಷ್ಟು ದೌರ್ಬಲ್ಯವಾಗಿಸುವ ಹುನ್ನಾರ ಇದಾಗಿದೆ. ನೀರು ಸರಬರಾಜನ್ನು ಜಲ ಮಂಡಳಿಗೆ ನೀಡಲಾಗಿದೆ, ಆಸ್ತಿ ನಿರ್ವಹಣೆ, ಶಾಲೆಗಳ, ಆಸ್ಪತ್ರೆಗಳ ನಿರ್ವಹಣೆ ಹೀಗೆ ಒಂದೊಂದೆ ನಿಯಂತ್ರಣವನ್ನು ಕಿತ್ತುಹಾಕಿ ಕೊನೆಗೊಂದು ದಿನ ಕೇವಲ ಅತೃಪ್ತರನ್ನು  ಕೂರಿಸುವ ಆವಾಸಸ್ಥಾನ ಆಗಲಿದೆ ಎಂದು ವ್ಯಂಗ್ಯವಾಡಿದರು.

ಈ ಮೂಲಕ ಜನತೆಯು ಪ್ರಶ್ನೆ ಮಾಡುವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳಿಗೆ ಇರುವ  ಸಮುದಾಯ ಆರೋಗ್ಯ ಜವಾಬ್ದಾರಿಯನ್ನು ಮರೆಮಾಚಿ  ಇಡೀ ಮಾಫಿಯಾವನ್ನು ಪ್ರಭಾವಿ ಶಾಸಕರು, ಸಚಿವರು ತಮ್ಮ ಕೈಯಲ್ಲಿ ಹಿಡಿಯುವ ಹುನ್ನಾರ ಇದಾಗಿದೆ ಎಂದರು. ಕಿಡ್ನಿ ವೈಫಲ್ಯದಿಂದ ರೋಗಿ ಹಂತ ಹಂತವಾಗಿ ಸಾಯುವಂತೆ ಬಿಬಿಎಂಪಿಯನ್ನು ಹಂತ ಹಂತವಾಗಿ ಸಾಯಿಸಲಾಗುತ್ತಿದೆ. ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಯಾರ ಮರ್ಜಿಗೆ ಒಳಗಾಗಿ ಈ ಕೆಲಸಕ್ಕೆ ಕೈಹಾಕಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಈ ಕೆಲಸಕ್ಕೆ ಬಿಬಿಎಂಪಿಯಾಗಲಿ ಸರ್ಕಾರವಾಗಲಿ ಕೈ ಹಾಕಿದರೆ ಆಮ್ ಆದ್ಮಿ ಪಕ್ಷ ಬೃಹತ್ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

5 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

6 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

19 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

22 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 day ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420