ಕಕ್ಕೇರಾ ಪಟ್ಟಣಕ್ಕೆ ವಾಲ್ಮೀಕಿ ಗುರುಪೀಠದ ಶ್ರೀಗಳ ಆಗಮನ

ಸುರಪುರ : ತಾಲೂಕಿನ ವಾಲ್ಮೀಕಿ ಸಮಾಜದ ಸಭೆಯನ್ನು ರಾಜನ ಹಳ್ಳಿಯಲ್ಲಿ ನಡೆಯುವ ಜಾತ್ರೆ ಪೂರ್ವ ಸಿದ್ಧತಾ ಸಭೆ ಹಾಗೂ ಮೀಸಲಾತಿ ಹೆಚ್ಚಳ ಕುರಿತು, ಮತ್ತು ಜನಜಾಗೃತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮುಖಂಡರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುಖಂಡರು, ನಾಳೆ 27 ನವೆಂಬರ್ ಬೆಳಿಗ್ಗೆ 11 ಗಂಟೆಗೆ ತಾಲೂಕಿನ “ಕಕ್ಕೇರಾ” ಪಟ್ಟಣದ ಶ್ರೀವಾಲ್ಮೀಕಿ ಭವನದಲ್ಲಿ ಸಭೆಯನ್ನು ಕರೆಯಲಾಗಿದೆ, ಸಭೆಯಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ ಹಾಗೂ ಸುರಪುರದ ಹಾಲಿ ಶಾಸಕರು,ಮಾಜಿ ಶಾಸಕರು, ಜಿಲ್ಲಾ.ತಾಲೂಕಾ, ಗ್ರಾಮ ಪಂಚಾಯತ್ ಸದಸ್ಯರು, ಪುರಸಭೆ ಸದಸ್ಯರು,ನಗರ ಸಭೆ ಸದಸ್ಯರುಗಳ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ

ಈ ಸಭೆಗೆ ಸುರಪುರ ಹಾಗೂ ಹುಣಸಿಗಿ ತಾಲೂಕಿನ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಯುವಕರು ಹಾಗೂ ವಾಲ್ಮೀಕಿ ಸಂಘದ ವಿವಿಧ ಸಂಘಟನೆಯ ಮುಖಂಡರು ಹಾಗೂ ಗ್ರಾಮ ಘಟಕಗಳ ಅಧ್ಯಕ್ಷ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಭಾಗವಹಿಸಬೇಕೆಂದು ತಿಳಿಸಿದ್ದು, ಪೂಜ್ಯ ಜಗದ್ಗುರುಗಳು ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳು ನಮ್ಮ ತಾಲೂಕಿಗೆ ಆಗಮಿಸಿ, ಸಮಾಜ ಬಾಂಧವರಿಗೆ ಹಿತನುಡಿಗಳನ್ನು ಹೇಳಲಿದ್ದಾರೆ ಕಾರಣ ತಾವುಗಳು ಒಗ್ಗಟ್ಟಾಗಿ ಒಬ್ಬರು ಮತ್ತೊಬ್ಬರಿಗೆ ಮಾಹಿತಿಯನ್ನು ಕೊಟ್ಟು ಈ ಸಭೆಗೆ ಆಗಮಿಸಿ ಯಶಸ್ವಿಗೊಳಿಸುವಂತೆ ಕೊರಿದ್ದಾರೆ.

ಸಂಘದ ಮುಖಂಡರಾದ ಸೀತಾರಾಮ ನಾಯಕ ಪಾಟೀಲ್,
ಸಿದ್ದನಗೌಡ ಪಾಟೀಲ್ ಕರಿಭಾವಿ , ಗಂಗಾಧರ ನಾಯಕ್ ತಿಂಥಣಿ, ಸೋಮನಾಥ ಡೊಣ್ಣೆಗೇರಾ ನಗರ ಸಭೆ ಸದಸ್ಯರು ಸುರಪುರ,ರಮೇಶ್ ದೊರೆ ಆಲ್ದಾಳ,ತಿರುಪತಿಗೌಡ ಚಿಗರಿಹಾಳ ,ವೆಂಕಟೇಶ ಬೇಟೆಗಾರ, ಪರಮಣ್ಣ ಕಕ್ಕೇರಾ ತಿಳಿಸಿದ್ದಾರೆ.

emedialine

Recent Posts

ಸಂಧ್ಯಾ ಹೊನಗುಂಟಿಕರ್ ಅವರ ಹೆಸರು ಕಳೆದುಕೊಂಡ‌ ಊರು ಕಥಾ ಸಂಕಲನ ಬಿಡುಗಡೆ

ಕಲಬುರಗಿ: ಈ ಕಥಾ ಸಂಕಲವನ್ನು ಓದಿದರೆ ಮಾತು ಬಾರದ ಮೌನ ಆವರಿಸುತ್ತದೆ. ಉತ್ತರ ಕರ್ನಾಟಕದ ಜನ ಮತ್ತೆ ಮತ್ತೆ ಬರೆದು…

21 mins ago

ಖಮೀತಕರ್ ಭವನದಲ್ಲಿ ಪಂಚಗವ್ಯ ಆಧಾರಿತ ಉಚಿತ ತಪಾಸಣಾ ಶಿಬಿರ 30ರಂದು

ಕಲಬುರಗಿ: ವಿಶ್ವ ಹಿಂದೂ ಪರಿಷತ್, ಕಲಬುರಗಿ ಮಹಾನಗರ, ಗೋರಕ್ಷಾ ವಿಭಾಗ ವತಿಯಿಂದ ಸೆ.30.ರಂದು ಬೆಳಿಗ್ಗೆ 10.ರಿಂದ ಸಂಜೆ 5ರ ವರೆಗೆ…

56 mins ago

ಸಿಯುಕೆಯಲ್ಲಿ ಸ್ವಚ್ಚತಾ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ: “ಸ್ವಚ್ಚತೆಯೇ ಆರೋಗ್ಯದ ಮೂಲ ಮಂತ್ರ” ಎಂದು ಶಾಂತಾ ಆಸ್ಪತ್ರೆಯ ವೈದ್ಯೆ ಡಾ. ಅಂಬಿಕಾ ಪಾಟಿಲ್ ಹೇಳಿದರು. ಇಂದು ಅವರು ಕರ್ನಾಟಕ…

1 hour ago

ಅಫಜಲಪುರ: ಸರಕಾರಿ ಪಾಲಿಟೆಕ್ನಿಕ್ ರಾಷ್ಟೀಯ ಅಭಿಯಂತರರ ದಿನಾಚರಣೆ

ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…

3 hours ago

ಪಿಎಂ ಆವಾಸ ಯೋಜನೆಯಲ್ಲಿ ಹಣಕ್ಕೆ ಬೇಡಿಕೆ- ಕ್ರಮಕ್ಕೆ ಗುತ್ತೇದಾರ ಆಗ್ರಹ

ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…

4 hours ago

ಶಿಥಿಲಗೊಂಡ ಮಳಖೇಡ ಕೋಟೆ ವೀಕ್ಷಿಸಿದ ಕಸಾಪ ಜಿಲ್ಲಾಧ್ಯಕ್ಷರು, ಸಾಹಿತಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420