ಕೋಲಾರ : ತಾಲೂಕಿನ ಖಾಜಿ ಕಲ್ಲಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ಸಮರ್ಪಣಾ ದಿನವನ್ನು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಇಂಚರ ನಾರಾಯಣಸ್ವಾಮಿ ರವರು ಮಾತನಾಡಿ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ ಎಂದರು.
ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ. ಆರ್ಥಿಕ. ರಾಜಕೀಯ. ನ್ಯಾಯ. ವಿಚಾರ. ಅಭಿವ್ಯಕ್ತಿ. ನಂಬಿಕೆ. ಧರ್ಮ. ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ. ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥ ಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ. ಘನತೆ. ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಎಂ ಪಿ ನಾರಾಯಣಸ್ವಾಮಿ. ಮುಖ್ಯ ಶಿಕ್ಷಕರಾದ ಇಂಚರ ನಾರಾಯಣಸ್ವಾಮಿ. ಶಾಲಾ ಸಿಬ್ಬಂದಿ ಎಂ ವಿ ಸುಜಾತ. ನರಸಾಪುರ ಗ್ರಾಮದ ಆರೋಗ್ಯ ಕೇಂದ್ರದ ಜೂನಿಯರ್ ಹೆಲ್ತ್ ಕೇರ್ ಅಸಿಸ್ಟೆಂಟ್ ರೇಣುಕಾ. ಅಂಗನವಾಡಿ ಕಾರ್ಯಕರ್ತೆ ತಿಮ್ಮಕ್ಕ. ಹಾಗೂ ಆಶಾ ಕಾರ್ಯಕರ್ತೆ ಶೋಭ ರವರು ಹಾಜರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…