ಕಲಬುರಗಿ: ಕೇಂದ್ರ ಸರಕಾರ ಬ್ಯಾಂಕ್ ವಲಯಗಳನ್ನು ಖಾಸಗೀಕರ ಮಾಡುವ ಮೂಲಕ ಸಾರ್ವಜನಿಕ ವಲಯವನ್ನು ನಾಶಮಾಡಲು ಹೊರಟ್ಟಿರುವ ವಿರುದ್ಧ ಆಲ್ ಇಂಡಿಯಾ ಬ್ಯಾಂಕ್ ಇಂಪ್ಲಾಯಿ ಅಸೋಯೆಷನ್ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಇಂದು ನಗರದ ಸಿಂಡಿಕೇಟ್ ಮುಖ್ಯ ಶಾಖೆಯ ಹತ್ತಿರ ಪ್ರತಿಭಟನೆ ನಡೆಸಿದ ಬ್ಯಾಂಕ್ ನೌಕರರು, ಸಾರ್ವಜನಿಕ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ ಬ್ಯಾಂಕ್ ನೌಕರರು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಬಲಪಡಿಸಿಸಬೇಕೆಂದು ಆಗ್ರಹಿಸಿದರು.
ಬ್ಯಾಂಕ್ ಕಲ್ಲಿ ಸಾಲ ಪಡೆದವರ ವಿರುದ್ಧ ಕಠಿಣ ಕ್ರಮ, ಬೃಹತ್ ಕಾರ್ಪೊರೇಟ್ ಎನ್ಪಿಎಗಳನ್ನು ಮರುಪಡೆಯಿರಿ, ಬ್ಯಾಂಕಿನ ಠೇವಣಿ ಬಡ್ಡಿದರ ಹೆಚ್ಚಿಸಿ, ನಿಯಮಿತ ಬ್ಯಾಂಕಿಂಗ್ ಹೊರಗುತ್ತಿಗೆ ನಿಲ್ಲಿಸಿ, ಬ್ಯಾಂಕ್ ಸಿಬ್ಬಂದಿಗಳ ಹೊಸ ಪಿಂಚಣಿ ಯೋಜನೆಗೆ ಸೇರಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾ ನಿರತ ಸಿಬ್ಬಂದಿಗಳು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ನಾರಾಯಣ್ ರೂಗಿ, ಪ್ರಧಾನ ಕಾರ್ಯದರ್ಶಿ ಚಂದ್ರಮೋಹನ್, ಖಜಾಂಚಿ ರವಿಶಂಕರ್ ಹುನಗುಂಡ್, ಕಾರ್ಯದರ್ಶಿ ವಿನಯ್, ಉಪಾಧ್ಯಕ್ಷರಾ ಮಹ್ಮದ್ ಅನ್ಸಾರಿ, ಪ್ರೀತಿ ರೂಪಾ, ರಾಧಿಕಾ ರಾಥೋಡ್, ಅಶ್ವಿನಿ ಪ್ರಣಡ್ನ್ಯಾ, ವೆಂಕಟೇಶ್ ಗಂಗರಾಮ್, ರವಿ ಸುಖದೇವ್, ಶಿವಕುಮಾರ್ ಕಟ್ಕೆ, ಕಿರಣ್ ಸಕ್ರೆ, ರವೀಂದ್ರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…