ಸುರಪುರ: ನಗರದ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕು.ಬಸವರಾಜೇಶ್ವರಿ ಘಂಟಿ ಮಾತನಾಡಿ, ನಾವೆಲ್ಲರೂ ಜನೇವರಿ ೨೬ ರಂದು ಸಂವಿಧಾನ ಜಾರಿಗೆ ಬಂದ ದಿನವನ್ನು ಆಚರಿಸುತ್ತೇವೆ.
ಆದರೆ ಅದಕ್ಕಿಂದ ಮುಂಚೆಯೇ ೧೯೪೯ ನವೆಂಬರ್ ೨೬ ರಂದು ಭಾರತದ ಸಂಸತ್ತಿನ ಶಾಸನ ಸಭೆಯಲ್ಲಿ ಅಂಬೇಡ್ಕರರು ಸಂವಿಧಾನವನ್ನು ಮಂಡಿಸಿದ ದಿನವನ್ನು ಭಾರತ ಸರಕಾರವು ಅವಿಸ್ಮರಣೀಯಗೊಳಿಸಲು ೨೦೧೫ ರಲ್ಲಿ ಅಂಬೇಡ್ಕರರ ೧೨೫ನೇ ಜನ್ಮ ಶತಮಾನೋತ್ಸವದ ಅಂಗವಾಗಿ ನವೆಂಬರ್ ೨೬ ರಂದು ಸಂವಿಧಾನ ದಿವಸ ಎಂದು ಪ್ರಕಟಣೆಯನ್ನು ಹೊರಡಿಸಿತು ಅಂದಿನಿಂದ ಇಂದಿನವರೆಗೆ ನಾವು ಸಂವಿಧಾನ ದಿನವನ್ನು ನಮ್ಮ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಆಶ್ರಯದಲ್ಲಿ ಆಚರಿಸುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಡಾ.ಮಲ್ಲಿಕಾರ್ಜುನ ಕಮತಗಿ, ಆದಿಶೇಷ ನೀಲಗಾರ, ಸುವರ್ಣ ಅಂಟೋಳಿ, ಚಂದ್ರಶೇಖರ. ವೆಂಕಟೇಶ ಜಾಲಗಾರ, ಮರೆಮ್ಮ ಕಟ್ಟಿಮನಿ, ಉಪಸ್ಥಿತರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…