ಸುರಪುರ: ನಾವೆಲ್ಲರು ನಿತ್ಯವು ಸಂವಿಧಾನದ ಅಡಿಯಲ್ಲಿ ಸೇವೆ ಸಲ್ಲಿಸುವ ಜೊತೆಗೆ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರಮಾಣ ಮಾಡುವುದಾಗಿ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಸಂವಿಧಾನ ಪ್ರಮಾಣ ಬೋಧಿಸಿದರು.
ನಗರದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನದ ಅಂಗವಾಗಿ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಮಾತನಾಡಿ,ಭಾರತದ ಸಂವಿಧಾನವನ್ನು ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದು ಕರುಡು ಪ್ರತಿಯನ್ನು ಸಮರ್ಪಿಸಿದ ಈ ದಿನವನ್ನು ಪ್ರತಿವರ್ಷ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ,ನಾವೆಲ್ಲರು ನಿತ್ಯವು ಸಂವಿಧಾನದ ಕಾನೂನುಗಳನ್ನು ಪಾಲನೆ ಮಾಡುವ ಜೊತೆಗೆ ಆರಕ್ಷಕರಾದ ನಾವು ಎಲ್ಲಾ ಕಾನೂನುಗಳನ್ನು ಗೌರವಿಸುವ ಮತ್ತು ಎತ್ತಿ ಹಿಡಿಯುವ ಕಾರ್ಯವನ್ನು ಚಾಚು ತಪ್ಪದೆ ಮಾಡುತ್ತೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆರಂಭದಲ್ಲಿ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಲಾಯಿತು.
ಈ ಸಂದರ್ಭದಲ್ಲಿ ಎಎಸ್ಐ ಹಣಮಂತಪ್ಪ ಮುಖ್ಯ ಪೊಲೀಸ್ ಪೇದೆಗಳಾದ ಬಸವರಾಜ ಮುದಗಲ್ ಬಸವರಾಜ ರಾಮನಗೋಳ ಚಂದ್ರಶೇಖರ ಕೂಟನೂರ ಬಸವರಾಜ ಕಲ್ಲೂರ ಶಿವಪ್ಪ ಜಾಧವ ದೇವಿಂದ್ರ ಮಂಜುನಾಥ ಮತ್ತು ಮಹಿಳಾ ಪೊಲೀಸ್ ಪೇದೆಯರಾದ ಸವಿತಾ ಪರಿಮಳ ಬನ್ನಮ್ಮ ಭಾಗವಹಿಸಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…