ಕೆಕೆಆರ್‌ಡಿಬಿ ಅಧ್ಯಕ್ಷರಿಂದ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಣೆ

0
22

ಕಲಬುರಗಿ: ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ದಕ್ಷಿಣ ಮತಕ್ಷೇತ್ರದಲ್ಲಿ ಕೋವಿಡ್-೧೯ ಪ್ರಯುಕ್ತವಾಗಿ ಸಂಕಷ್ಟದಲ್ಲಿದ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ಪೂರೈಸಲು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದ ಪ್ರಯುಕ್ತ ಇಲಾಖೆ ವತಿಯಿಂದ ಆಹಾರ ಕಿಟ್‌ಗಳನ್ನು ಸಾಂಕೇತಿಕವಾಗಿ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ವಿತರಿಸಲಾಯಿತು.

ಕಾರ್ಮಿಕ ಅಧಿಕಾರಿಗಳಾದ ಶ್ರೀಹರಿ ದೇಶಪಾಂಡೆ, ಡಾ.ದತ್ತಾತ್ರೇಯ ಜೆ.ಗಾದಾ, ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ ಬಲ್ಲೂರ, ಎನ್‌ಸಿಎಲ್‌ಪಿ ಯೋಜನಾ ನಿದೇರ್ಶಕರಾದ ಸಂತೋಷಕುಮಾರ, ಕುಡಾ ಅಧ್ಯಕ್ಷ ದಯಾಘನ ಧಾರವಾಡಕರ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೆಂಗಟಿ, ಬಿಜೆಪಿ ನಗರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶ್ರೀನಿವಾಸ ದೇಸಾಯಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here