ಸುರಪುರ: ನಗರಕ್ಕೆ ಬರುವ ರಾಜ್ಯದ ಬೇರೆ ಬೇರೆ ಬಸ್ ಡಿಪೋದ ಬಸ್ಗಳು ನಗರದ ಬಸ್ ನಿಲ್ದಾಣದೊಳಗೆ ಬರದೆ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ಮೂಲಕ ಹೊರಗಿನಿಂದಲೆ ಹೋಗುತ್ತವೆ,ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಕಾರ್ಮಿಕ ಮುಖಂಡ ದೇವಿಂದ್ರಪ್ಪ ಪತ್ತಾರ ಬೇಸರ ವ್ಯಕ್ತಪಡಿಸಿದರು.
ನಗರದ ಬಸ್ ಡಿಪೋ ಮುಂದೆ ಸಗರನಾಡು ಎಲೆಕ್ಟ್ರೀಕಲ್ ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಸುರಪುರ ಬಸ್ ನಿಲ್ದಾಣದಲ್ಲಿ ಸಂಜೆಯಾದರೆ ರಾಜ್ಯದ ಬೇರೆ ಬೇರೆ ಬಸ್ ಡಿಪೋದ ಬಸ್ಗಳು ಬಸ್ ನಿಲ್ದಾಣದೊಳಗೆ ಬರುವುದಿಲ್ಲ,ಜನರು ಬಸ್ಗಾಗಿ ಕಾದು ಕಾದು ಬೇಜಾರು ಪಟ್ಟುಕೊಳ್ಳುತ್ತಾರೆ.ಕೆಲವು ಕಡೆಗೆ ಹೋಗಲು ಒಂದೊಂದೆ ಬಸ್ ಇರುವ ಕಡೆಗೆ ಹೋಗಲು ಜನರು ತುಂಬಾ ತೊಂದರೆ ಪಡುವಂತಾಗುತ್ತಿದೆ.ಆದ್ದರಿಂದ ಯಾವುದೇ ಬಸ್ ಡಿಪೋದ ಬಸ್ ನಗರಕ್ಕೆ ಬಂದರೆ ಕಡ್ಡಾಯವಾಗಿ ಬಸ್ ನಿಲ್ದಾಣದೊಳಗೆ ಬಂದು ಹೋಗುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು,ಇಲ್ಲವಾದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಿದರು.
ನಂತರ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ಘಟಕ ವ್ಯವಸ್ಥಾಪಕರು ಮಾತನಾಡಿ,ತಮ್ಮ ಬೇಡಿಕೆ ನ್ಯಾಯಯುತವಾಗಿದೆ.ಈ ಮುಂದೆ ಯಾವುದೇ ಬಸ್ ಬಂದರು ಕಡ್ಡಾಯವಾಗಿ ನಿಲ್ದಾಣದೊಳಗೆ ಹೋಗಿ ಬರುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಬ್ದುಲ್ ರೌಫ್ ಮಹ್ಮದ ಮೌಲಾ ಸೌದಾಗರ್ ಅಬೀದ್ ಹುಸೇನ ಪಗಡಿ ದಾವೂದ್ ಇಬ್ರಾಹಿಂ ಪಠಾಣ್ ಮುಬಿನ್ ದಖನಿ ರಾಜಾ ಚನ್ನಪ್ಪ ನಾಯಕ ಎಂ ಪಟೇಲ್ ಖಾಜಾ ಅಜ್ಮೀರ್ ಸೇರಿದಂತೆ ಅನೇಕರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…