ಪ್ರತಿ ಮಗುವಿಗೆ ಶಾಲಾ ಪೂರ್ವ ಶಿಕ್ಷಣ ತುಂಬಾ ಅಗತ್ಯ: ಲಾಲಸಾಬ್ ಪೀರಾಪುರ

0
132

ಸುರಪುರ: ಪ್ರತಿಯೊಂದು ಮಗುವು ಶಾಲೆಗೆ ಹೋಗಿ ಅಕ್ಷರ ಕಲಿಯುವ ಮುನ್ನ ಮಕ್ಕಳಲ್ಲಿ ಕಲಿಕಾ ಆಸಕ್ತಿಯನ್ನು ಬೆಳೆಸುವುದು ತುಂಬಾ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಂ ಇಲಾಖೆಯ ಯೋಜನಾಧಿಕಾರಿ ಲಾಲಸಾಬ್ ಪೀರಾಪುರ ಮಾತನಾಡಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ಸುರಪುರ ವಲಯ ಮಟ್ಟದ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳಲ್ಲಿ ಓದಿನ ಕುರಿತು ಆಸಕ್ತಿ ಮೂಡಿಸುವುದು ಹಾಗು ಮಕ್ಕಳಿಗೆ ಆಟದ ಜೊತೆಯಲ್ಲಿ ಅಕ್ಷರ ಜ್ಞಾನ ಮೂಡಿಸುವುದು ಮತ್ತು ಮಕ್ಕಳ ಲಾಲನೆ ಪಾಲನೆಯೊಂದಿಗೆ ಅವುಗಳು ಮಾನಸಿಕ ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆ ಕುರಿತು ಅ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ,ಇದರಿಂದ ಮಗುವು ಉತ್ತಮವಾದ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಜೊತೆಗೆ ಒಳ್ಳೆಯ ಬೆಳವಣಿಗೆಯನ್ನು ಕೂಡ ಹೊಂದಲಿದೆ.ಆದ್ದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯತ್ತ ಗಮನ ಹರಿಸುವಂತೆ ಅವರು ಕರೆ ನೀಡಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸುನೀತಾ ಪಾಟೀಲ್ ಮತ್ತು ಪದ್ಮಾವತಿ ನಾಯಕ ಮಾತನಾಡಿ ಮಕ್ಕಳ ಕಲಿಸುವ ವಿಧಾನವನ್ನು ತಿಳಿಸಿಕೊಟ್ಟರು.ಶರಣಮ್ಮ ದೇಸಾಯಿ ಕಾರ್ಯಕ್ರಮವನ್ನು ನಿರೂಪಿಸಿದರು,ಸುರಪುರ ವಲಯ ಮಟ್ಟದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here