ಬಿಸಿ ಬಿಸಿ ಸುದ್ದಿ

ದಲಿತ ಸಮುದಾಯದವರಿಗೆ ಸರಕಾರದಿಂದ ರುದ್ರಭೂಮಿ ಒದಗಿಸಬೇಕೆಂದು ಒತ್ತಾಯಿಸಿ ಮನವಿ

ಶಹಾಬಾದ:ಹೊನಗುಂಟಾ ಗ್ರಾಮದ ಭೀಮನಗರದ ದಲಿತ ಸಮುದಾಯದವರಿಗೆ ಸರಕಾರದಿಂದ ರುದ್ರಭೂಮಿ ಒದಗಿಸಬೇಕೆಂದು ಒತ್ತಾಯಿಸಿ ಸೋಮವಾರ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಒಕ್ಕೂಟದ ತಾಲೂಕಾ ಸಂಚಾಲಕ ಪೂಜಪ್ಪ ಮೇತ್ರೆ, ಈಗಾಗಲೇ ಹೊನಗುಂಟಾ ಗ್ರಾಮದ ಭೀಮನಗರದಲ್ಲಿ ಸುಮಾರು 150ಕ್ಕೂ ಹೆಚ್ಚು ದಲಿತ ಸಮುದಾಯಗಳಿವೆ.ಅದರಲ್ಲಿ ಸರಿಸುಮಾರು ಏಳೆಂಟು ಜನರಿಗೆ ಮಾತ್ರ ಸ್ವಂತ ಭೂಮಿ ಹೊಂದಿದ್ದು, ಉಳಿದವರಿಗೆ ಭೂಮಿಯಿಲ್ಲದ ಕಾರಣ ಶವ ಸಂಸ್ಕಾರ ಮಾಡಲು ತೊಂದರೆಯಾಗುತ್ತಿದೆ.ಸುಮಾರು ಹತ್ತು ದಶಕಗಳಿಂದ ಭೂಮಿ ಇದ್ದವರಿಗೆ ಮನವಿ ಮಾಡಿ ಶವ ಸಂಸ್ಕಾರ ಮಾಡುತ್ತ ಬಂದಿದ್ದೆವೆ.ಈಗ ನಮ್ಮ ದಲಿತ ಸಮುದಾಯದವರಿಗೆ ಸರಕಾರದಿಂದ ರುದ್ರಭೂಮಿ ಒದಗಿಸಿದರೇ ಬಹಳ ಅನುಕೂಲವಾಗುತ್ತದೆ.ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ತಹಸೀಲ್ದಾರರಿಗೆ ಮನವಿ ಮಾಡಿದರು.

ದಲಿತ ವಿದ್ಯಾರ್ಥಿ ಒಕ್ಕೂಟದ ಸಂಘಟನಾ ಸಂಚಾಲಕ ಶರಣಬಸಪ್ಪ.ಎಮ್,ರಾಘವೇಂದ್ರ ಗುಡೂರ್, ಮಲ್ಲಿಕಾರ್ಜುನ ಗಿರೇನೂರ, ಸಂತೋಷ ಹಾದಿಮನಿ,ಅರ್ಜುನ ಮೇತ್ರೆ, ಮೈಲಾರಿ ಓಣಿ, ಬಸವರಾಜ ಶಾಸ್ತ್ರಿ, ಚಂದ್ರಾಮ ಹಲಕಟ್ಟಿ, ನಾಗಪ್ಪ ನ್ಯಾವಿನಿ, ವಿಶ್ವ ಯನಗುಂಟಿ, ಮೌನೇಶ ಕೌಂಟಿಗಿ, ನಿಂಗಪ್ಪ ನ್ಯಾವಿನಿ, ಚನ್ನಮಲ್ಲಪ್ಪ, ಶಿವಯೋಗಿ ಜುಂಜನಿ ಇತರರು ಇದ್ದರು.

emedia line

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

8 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

9 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

9 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

10 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

10 hours ago