ವಿವಿಧ ಬೇಡಿಕೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಕನಕದಾಸ ಜಾಗೃತಿ ಸಮಿತಿಯಿಂದ ಶಾಸಕರಿಗೆ ಮನವಿ

ಶಹಾಬಾದ:ಹಳೆಶಹಾಬಾದನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಂಥಾಲಯ, ಶಾಲಾ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ನೀಡಲು ಹಾಗೂ ಶೌಚಾಲಯಗಳನ್ನು ಸಾರ್ವಜನಿಕ ಲಭ್ಯವಾಗುವಂತೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಕನಕದಾಸ ಜಾಗೃತಿ ಸಮಿತಿಯಿಂದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನಕದಾಸ ಜಾಗೃತಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರಿ, ಹಳೆ ಶಹಾಬಾದನಲ್ಲಿ ಸುಮಾರು ಹತ್ತು ಸಾವಿರ ಜನಸಂಖ್ಯೆಯನ್ನು ಹೊಂದಿದೆ.ಇಲ್ಲಿನ ಜನರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಸುಮಾರು 3ಕಿಮೀ ದೂರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ.ಗ್ರಾಮದ ಹಿರಿಯ ಜೀವಿಗಳು, ಕೂಲಿ ಕಾಂರ್ಇಕರು, ಗಣಿ ಕಾಮರ್ಿಕರು ಅತ್ಯಂತ ಬಡವರಾಗಿದ್ದು, ಸಣ್ಣ ಪುಟ್ಟ ಕಾಯಿಲೆಗೆ ದೂರದವರೆಗೆ ಹೋಗಲು ತೊಂದರೆಯಾಗುತ್ತಿದೆ.ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಇಲ್ಲಿನ ಜನರಿಗೆ ಗ್ರಂಥಾಲಯ ಒದಗಿಸಬೇಕು.ಈಗಾಗಲೇ ಶಾಲಾ ಕಟ್ಟಡ ನಿರ್ಮಾಣವಾಗುತ್ತಿದ್ದು, ಅದರಲ್ಲಿ ಕೇವಲ ನಾಲ್ಕು ಕೋಣೆಗಳು ಮಾತ್ರ ಇವೆ. ಈ ಕೋಣೆಗಳು ಸಾಕಾಗುವುದಿಲ್ಲ. ಆದ್ದರಿಂದ ಹೆಚ್ಚುವರಿಯಾಗಿ ಇನ್ನೂ ಆರು ಕೋಣೆಗಳ ಅವಶ್ಯಕತೆ ಇರುವುದರಿಂದ ಹೆಚ್ಚುವರಿ ಅನುದಾನ ನೀಡಬೇಕು.ಅಲ್ಲದೇ ನಾಲ್ಕು ವಾರ್ಡಗಳಲ್ಲಿ ನಗರಸಭೆಯಿಂದ ಶೌಚಾಲಯಗಳನ್ನು ನಿಮರ್ಿಸಲಾಗಿದೆ.ಆದರೆ ಎರಡು ವರ್ಷ ಗತಿಸಿದರೂ ಇನ್ನೂ ಸಾರ್ವಜನಿಕರ ಬಳಕೆಗೆ ಅವಕಾಶ ಮಾಡಿಕೊಟ್ಟಿಲ್ಲ.ಅಲ್ಲದೇಕೆಲವೊಂದಕ್ಕೆ ನೀರಿನ ವ್ಯವಸ್ಥೆ ಮಾಡಿದರೇ, ಇನ್ನೂ ಕೆಲವೊಂದಕ್ಕೆ ನೀರಿನ ವ್ಯವಸ್ಥೆಯೂ ಮಾಡಿಲ್ಲ.ಕೂಡಲೇ ಸಾರ್ವಜನಿಕರಿಗೆ ಬಳಕೆ ಮಾಡಲು ಅನುಕೂಲ ಮಾಡಿಕೊಡುವತ್ತ ಅಧಿಕಾರಿಗಳಿಗೆ ತಾಕೀತು ಮಾಡಬೇಕೆಂದು ಒತ್ತಾಯಿಸಿದರು.

ಆಶ್ರಯ ಸಮಿತಿ ಸದಸ್ಯ ಶಿವುಗೌಡ ಪಾಟೀಲ,ಸಂಗೊಳ್ಳಿ ರಾಯಣ್ಣ ಜಿಲ್ಲಾಧ್ಯಕ್ಷ ಬಸವರಾಜ ಮದ್ರಕಿ,ರಮೇಶ ಜೋಗದನಕರ್,ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ, ನಗರಸಭೆಯ ಸದಸ್ಯ ಮಂಜುನಾಥ ಪೂಜಾರಿ,ಕನಕಪ್ಪ ದಂಡಗುಲಕರ್, ನಾಗನಗೌಡ ಪಾಟೀಲ, ಸುಭಾಷ ಸಾಕ್ರೆ ಇತರರು ಇದ್ದರು.

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420