ಐತಿಹಾಸಿಕ ಶ್ರೀ ಕ್ಷೇತ್ರ ಪಾಪನಾಶ ಶಿವಲಿಂಗ ದೇವಸ್ಥಾನದ ಅರ್ಚಕರ ಬರ್ಬರ ಹತ್ಯೆ

0
139

ಬೀದರ್: ಬೀದರ್​ನ ಐತಿಹಾಸಿಕ ಶ್ರೀ ಕ್ಷೇತ್ರ ಪಾಪನಾಶ ಶಿವಲಿಂಗ ದೇವಸ್ಥಾನದ ಅರ್ಚಕರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

Contact Your\'s Advertisement; 9902492681

ರಮೇಶ್ ಸ್ವಾಮಿ(52) ಕೊಲೆಯಾದ ಅರ್ಚಕ. ಪಾಪನಾಶ ಶಿವಲಿಂಗ ದೇವಸ್ಥಾನವು ಬೀದರ್ ನಗರದಲ್ಲಿರುವ ಸುಪ್ರಸಿದ್ಧ ದೇವಾಲಯ. ದೇವಸ್ಥಾನದ ಕಲ್ಯಾಣ ಮಂಟಪದ ಒಳಗೆಯೇ ದುಷ್ಕರ್ಮಿಗಳು ರಮೇಶ್​ರನ್ನು ಹತ್ಯೆ ಮಾಡಿದ್ದಾರೆ. ಆದರೆ, ಕೊಲೆಗೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಪೊಲೀಸ್​ ತನಿಖೆಯ ನಂತರವಷ್ಟೇ ಪ್ರಕರಣದ ಹಿಂದಿನ ಕಾರಣ ಬಹಿರಂಗವಾಗಲಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದರ್ ನ್ಯೂ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here