ಕಲಬುರಗಿ: ನಗರದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ.32 ರ ಹಳೇ ಕಪನೂರಿನ ಮಾಸ್ತರ್ ಬಡಾವಣೆಯ ಗಲ್ಲಿಯಲ್ಲಿ ಇರುವ ನಾಲಾವೊಂದು ಪ್ರತಿದಿನವೂ ತುಂಬಿ ಹರಿಯುತ್ತಿದೆ. ಇದರಿಂದ ನಾಲಾ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಪಾಲಿಕೆ ಆಯುಕ್ತರಿಗೆ ದೂರು ನೀಡಿದ್ದಾರೆ.
ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಬರೆದಿರುವ ಅವರು ಬಡಾವಣೆಯಲ್ಲಿ ಸಾರ್ವಜನಿಕರಿಗೆ ತುಂಬಾ ತೊಂದರೆ,ಜೊತೆಗೆ ಓಡಾಡಲು ತೊಂದರೆ ತಪ್ಪತ್ತಿಲ್ಲ , ಹಾಗಾಗಿ ನಾಲಾ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಅಲ್ಲಿ ಹರಿದು ಬರುವ ಚರಂಡಿ ನೀರನ್ನು ಸರಾಗವಾಗಿ ಮುಂದಕ್ಕೆ ಸಾಗದಂತೆ ಕ್ರಮ ಕೈಗೊಳ್ಳಬೇಕು ಕರವೇ ( ಕನ್ನಡಿಗರ ಬಣ) ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ನಾಲಾ ಸ್ವಚ್ಚತೆಯ ಬಗ್ಗೆ ಮಹಾನಗರ ಪಾಲಿಕೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ . ಮೊದಲೇ ಕೊರೊನಾದಂತಹ ಭೀಕರ ಸೊಂಕು ಆವರಿಸಿರುವ ಹಿನ್ನೆಲೆಯಲ್ಲಿ ಕಪನೂರಿನ ಜನತೆ ನೆಗಡಿ,ಕೆಮ್ಮು ,ಜ್ವರಗಳಿಂದ ಬಳಲುತ್ತಿರುವ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಧೋರಣೆ ಎಷ್ಟರಮಟ್ಟಿಗೆ ಸರಿ ಎಂಬುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಆದಷ್ಟು ಬೇಗ ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ ಒಂದು ವೇಳೆ ವಾರದಲ್ಲಿ ತಾವೂಗಳು ಕಪನೂರಿನ ಮಾಸ್ತರ್ ಬಡಾವಣೆಗೆ ಭೇಟಿ ನೀಡದಿದ್ದರೆ ಕಲಬುರಗಿ ಬೀದರ ರಾಷ್ಟ್ರೀಯ ಹೆದ್ದಾರಿ ಬಂದ ಮಾಡುವ ಮೂಲಕ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.