ಸುರಪುರ: ನಗರದಲ್ಲಿ ಕುಡಿಯುವ ನೀರಿನ ಅಭಾವ ದೊಡ್ಡ ಮಟ್ಟದಲ್ಲಿ ಉಂಟಾಗಿದ್ದು ನೀರಿನ ಅಭಾವ ನೀಗಿಸಲು ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಹಸನಾಪುರ ವಾರ್ಡ ಸಂಖ್ಯೆ ೧೯ರ ಸಾರ್ವಜನಿಕರು ಮಂಗಳವಾರ ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ಹಸನಾಪುರದಲ್ಲಿನ ಜನರಿಗೆ ಕುಡಿಯುವ ನೀರಿಲ್ಲದೆ ಅನೇಕ ತಿಂಗಳುಗಳಿಂದ ಸಮಸ್ಯೆಯಿದೆ,ಇದನ್ನ ನಗರಸಭೆಯ ಗಮನಕ್ಕೆ ತಂದರು ಯಾವುದೇ ಪ್ರಯೋಜನೆಯಾಗುತ್ತಿಲ್ಲ.ಆದ್ದರಿಂದ ಇಂದು ಮಹಿಳೆಯರು ಕೂಡ ಬೇಸತ್ತು ನಗರಸಭೆ ಮುಂದೆ ಪ್ರತಿಭಟನೆ ನಡೆಸುವ ಅನಿವಾರ್ಯತೆ ಉಂಟಾಗಿದೆ,ಕೂಡಲೆ ಕುಡಿಯುವ ನೀರು ಒದಗಿಸಬೇಕು ಮತ್ತು ಈ ನಮ್ಮ ವಾರ್ಡಿಗೆ ನೀರು ಬಿಡುವ ಕೆಲಸಗಾರ ಸರಿಯಾಗಿ ಕೆಲಸ ನಿರ್ವಹಿಸದೆ ಜನರಿಗೆ ನೀರಿನ ತೊಂದರೆ ಉಂಟಾಗುವಲ್ಲಿ ಇವರದು ಪಾತ್ರ ದೊಡ್ಡದಿದೆ.ಆದ್ದರಿಂದ ಕೂಡಲೆ ನೀರು ಬಿಡುವ ಕೆಲಸಗಾರ ಬೇರೆಯವರನ್ನು ನಿಯೋಜಿಸುವಂತೆ ಒತ್ತಾಯಿಸಿದರು.
ನಗರಸಭೆಯ ಪೌರಾಯುಕ್ತರಿಗೆ ಬರೆದ ಮನವಿಯನ್ನು ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಮೂಲಕ ಸಲ್ಲಿಸಿದರು. ಈ ಸಂದರ್ಭದಲ್ಲಿ ಪದ್ದಮ್ಮ ಅಡಿವೆಪ್ಪ,ಶಂಕರಮ್ಮ ಮಾನಪ್ಪ,ಮಲ್ಲಮ್ಮ ಯಂಕಣ್ಣ,ದ್ಯಾವಣ್ಣ ಭೀಮಣ್ಣ,ಲಕ್ಷ್ಮೀ ಜಗದೀಶ,ಪದ್ಮಾವತಿ ವೆಂಕಟೇಶ,ಹಸೀನಾಬೇಗಂ,ಮಂಜುಳಾ ಬಸವರಾಜ,ಶರಣಮ್ಮ ಪರಶುರಾಮ,ಲಕ್ಷ್ಮಣ,ಅಬ್ದುಲ ಮಜೀದ್,ಪರಶುರಾಮ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…