ಸುರಪುರ: 2007ರ ಅಗಸ್ಟ್ 2 ರಂದು ತಾಲ್ಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತ್ಯವ್ಯ ಮಾಡಿದ್ದರು. ಅಂದು ಸಿಎಂ ಗ್ರಾಮ ವಾಸ್ತವ್ಯ ಮಾಡಿದ ಗ್ರಾಮದಲ್ಲಿ ಇದುವರೆಗೆ ಆದ ಅಭೀವೃಧ್ದಿಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕೂರ್ಮರಾವ್ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ವಾಸ್ತವ್ಯ ಸಂದರ್ಭ ತಂಗಿದ್ದ ಮಲ್ಲಯ್ಯ ಸ್ವಾಮಿ ಹಿರೇಮಠರ ಮನೆಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಗ್ರಾಮದ ಅನೇಕರು ಡಿಸಿಯವರನ್ನು ಭೇಟಿ ಮಾಡಿ ಅಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿಕೊಂಡಿದ್ದ ಕಾಮಗಾರಿಗಳ ಬಗ್ಗೆ ಮಾಹಿತಿನೀಡುತ್ತಾ,ಮುಖ್ಯಮಂತ್ರಿಗಳು ನಮ್ಮ ಗ್ರಾಮಕ್ಕೆ ಬ್ಯಾಂಕ್,ರೈತ ಸಂಪರ್ಕ ಕೇಂದ್ರ,ಆಸ್ಪತ್ರೆ ಮತ್ತು ಶಾಲಾ ಕಾಲೇಜು ಮಂಜೂರು ಮಾಡುವುದಾಗಿ ಹೇಳಿದ್ದರು.
ಅಲ್ಲದೆ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು,ಇದುವರೆಗೆ ಅವರು ಹೇಳಿದ ಯಾವುದೆ ಕಾಮಗಾರಿಗಳು ನಡೆದಿಲ್ಲ.ಈಗಲಾದರು ನಮ್ಮ ಗ್ರಾಮಕ್ಕೆ ಆಸ್ಪತ್ರೆ,ಬ್ಯಾಂಕ್ ಮತ್ತು ರೈತ ಸಂಪರ್ಕ ಕೇಂದ್ರ ಸೇರಿದಂತೆ ಇತರೆ ಅಭೀವೃಧ್ಧಿ ಕಾರ್ಯಗಳ ಮಾಡಲು ವರದಿ ಸಲ್ಲಿಸುವಂತೆ ವಿನಂತಿಸಿದರು.
ನಂತರ ನೂತನವಾಗಿ ನಿರ್ಮಿಸಲಾದ ಶಾಲಾ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿದರು.ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳ ಕಲ್ಪಿಸಿ ಶೀಘ್ರವೆ ಶಾಲಾ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಹುಣಸಗಿ ತಹಸೀಲ್ದಾರ ಶಶಿಧರ ರೆಡ್ಡಿ ಜೊತೆಯಿದ್ದರು.
ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದೇವಣ್ಣ ಚಾನಕೋಟಿ,ನಿಂಗಣ್ಣ ಗೋಡಿಹಾಳ,ರಾಜು ದೇವರು,ಮಲ್ಲಯ್ಯ ಸ್ವಾಮಿ ಹಿರೇಮಠ,ಬಸವರಾಜ ಕುಂಬಾರ ಮೇಡಿಕಲ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…