ಸಂಘಗಳು ಅಭಿವೃದ್ಧಿ ಹೊಂದಬೇಕಾದರೆ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆ ಮುಖ್ಯ- ಸಿದ್ಧಲಿಂಗ ಸ್ವಾಮಿಗಳು

ಶಹಾಬಾದ:ಯಾವುದೇ ಪತ್ತಿನ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಬೇಕಾದರೆ, ಆ ಸಂಘದಲ್ಲಿ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆ ಪ್ರಾಮುಖ್ಯತೆ ವಹಿಸುತ್ತದೆ ಎಂದು ಮುಗುಳನಾಗಾವನ ಸಿದ್ಧಲಿಂಗ ಸ್ವಾಮಿಗಳು ಹೇಳಿದರು.

ಅವರು ಶನಿವಾರ ನಗರದ ಭೋವಿ ವಡ್ಡರ್ ಸಮಾಜದ ವತಿಯಿಂದ ಆಯೋಜಿಸಲಾದ ಸಿದ್ಧರಾಮೇಶ್ವರ ಪರಿಶಿಷ್ಟ ಜಾತಿ ಪತ್ತಿನ ಸಹಕಾರ ಸಂಘದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು.

ಹನ್ನೇರಡನೇ ಶತಮಾನದ ಶರಣ ಸಿದ್ಧರಾಮೇಶ್ವರರ ಹೆಸರಿನಲ್ಲಿ ಪ್ರಾರಂಭ ಮಾಡುತ್ತಿರುವ ಪತ್ತಿನ ಸಹಕಾರ ಸಂಘ ಸಿದ್ಧರಾಮೇಶ್ವರರ ಹಾಗೇ ಕಾಯಕ ನಿಷ್ಠೆಯಿಂದಲೇ ಕೂಡಿರಬೇಕು.ಎಲ್ಲಾ ಮನಸ್ಸುಗಳು ಒಂದಾಗಿರಬೇಕು.ಎಲ್ಲರೂ ಮುಂದಾಳತ್ವ ವಹಿಸಿದವರಿಗೆ ಸಹಕಾರ ನೀಡಿದಾಗ ಮಾತ್ರ ಸಂಘದ ಬೆಳವಣಿಗೆ ಪರಿಪೂರ್ಣವಾಗಿ ಸಾಗುತ್ತದೆ ಎಂದರಲ್ಲದೇ, ಸಂಘದಲ್ಲಿ ರಾಜಕೀಯ ತರದೇ, ಬಡ, ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಅವರನ್ನು ಸ್ವಾಲಂಬಿಗಳಾಗುವಲ್ಲಿ ನಿಮ್ಮ ನೆರವು ಎಂದಿಗೂ ಇರಲಿ ಎಂದು ಹೇಳಿದರು.

ಸಹಕಾರಿ ಸಂಘದ ಸಹಾಯಕ ಪ್ರಬಂಧಕ ರವೀಂದ್ರ ಮಾತನಾಡಿ, ಬಹಳಷ್ಟು ಸಹಕಾರಿ ಸಂಘಗಳು ಹುಟ್ಟಿವೆ.ಅಷ್ಟೇ ವೇಗವಾಗಿ ಮುಚ್ಚಿರುವುದು ನಾವು ಕಂಡಿದ್ದೆವೆ.ಕಾರಣ ಆಡಳಿತಮಂಡಳಿಯಲ್ಲಿ ಹೊಂದಾಣಿಕೆ ಇಲ್ಲದಿರುವುದು.ಆದ್ದರಿಂದ ಎಲ್ಲರೂ ಒಂದಾಗಿ ಸಂಘದ ಬೆಳವಣಿಗೆಗೆ ಶ್ರಮಿಸಿದರೇ, ಮುಂದೆ ಸಂಘ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತದೆ ಎಂದರು.

ಚಿಂಚೋಳಿ ಸಿಡಿಪಿಓ ಅಣ್ಣಪ್ಪ ವೇದಿಕೆಯ ಮೇಲಿದ್ದರು. ಭೋವಿ ವಡ್ಡರ್ ಸಮಾಜದ ಉಪಾಧ್ಯಕ್ಷ ಅನೀಲ ಭೋರಗಾಂವಕರ್ ಅಧ್ಯಕ್ಷತೆ ವಹಿಸಿದ್ದರು.

ದೇವದಾಸ ಜಾಧವ ನಿರೂಪಿಸಿದರು,ಹಣಮಂತ ಪವಾರ ಸ್ವಾಗತಿಸಿದರು, ಸಂಜಯ್ ವಿಠಕರ್ ವಂದಿಸಿದರು.

ಭಗವಾನ ದಂಡಗುಲಕರ್,ಅಂಬುಬಾಯಿ ಶಂಕರ ದೇಸಾಯಿ,ವೆಂಕಟೇಶ ಕುಸಾಳೆ, ಸುಭಾಷ ಜಾಪೂರ, ಬಸವರಾಜ ಬಿರಾದಾರ, ಬಸವರಾಜ ಮದ್ರಕಿ, ನಾಗರಾಜ ಮೇಲಗಿರಿ ಪವಾರ,ಕನಕಪ್ಪ ದಂಡಗುಲಕರ್,ರಾಜಣ್ಣ ಪವಾರ, ರಾಮು ಕುಸಾಳೆ, ಲಕ್ಷ್ಮಿಬಾಯಿ ಕುಸಾಳೆ, ತಿಮ್ಮಾಬಾಯಿ ಕುಸಾಳೆ, ಸಿದ್ರಾಮ ಕುಸಾಳೆ ಸೇರಿದಂತೆ ಸಮಾಜದ ಅನೇಕ ಮುಖಂಡರು ಹಾಜರಿದ್ದರು.

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420