ದೇವಿಕೆರಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಸತ್ಯಂಪೇಟೆ ಆಯ್ಕೆ

0
28

ಸುರಪುರ: ತಾಲೂಕಿನ ದೇವಿಕೆರಾದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ರೈತ ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು ೪ ನೂರಕ್ಕು ಹೆಚ್ಚು ಜನ ರೈತ ಸದಸ್ಯರನ್ನು ಹೊಂದಿರುವ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಸತ್ಯಂಪೇಟೆಯವರು ಅವಿರೋಧವಾಗಿ ನಿರ್ದೇಶಕರಾಗಿ ನೇಮಕಗೊಂಡು ನಂತರ ಅಧ್ಯಕ್ಷಸ್ಥಾನಕ್ಕೆ ನಡೆದ ಚುನಾವಣೆಯಲ್ಲಿಯೂ ಎಲ್ಲಾ ೧೩ ಜನ ನಿರ್ದೇಶಕರ ಸೂಚನೆಯಂತೆ ಅಧ್ಯಕ್ಷರಾಗಿ ನೇಮಕಗೊಂಡರು,ಅಲ್ಲದೆ ಉಪಾಧ್ಯಕ್ಷರಾಗಿ ಹಣಮಂತ್ರಾಯ ಜಾಲಹಳ್ಳಿ ದೀವಳಗುಡ್ಡ ಅವರನ್ನು ನೇಮಕಗೊಳಿಸಲಾಯಿತು.

Contact Your\'s Advertisement; 9902492681

ಮಲ್ಲಿಕಾರ್ಜುನ ಸತ್ಯಂಪೇಟೆಯವರು ಅಧ್ಯಕ್ಷರಾಗಿ ನೇಮಕಗೊಳ್ಳುತ್ತಿದ್ದಂತೆ ಅವರ ಬೆಂಬಲಿಗರು ಸಂಭ್ರಮಾಚರಿಸಿದರು.ಈ ಸಂದರ್ಭದಲ್ಲಿ ಮುಖಂಡ ಆನಂದ ವಿಶ್ವಕರ್ಮ ಸಂಗಣ್ಣ ಗುಳಗಿ ಸತ್ಯಂಪೇಟೆ ಸೇರಿದಂತೆ ಅನೇಕ ಜನ ನಿರ್ದೇಶಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here