ಅಂಬೇಡ್ಕರ್ ಹಾಕಿ ಕೊಟ್ಟಿರುವ ಮಾರ್ಗದಲ್ಲಿ ನಡೆದರೆ ಮಾತ್ರ ಅಂಬೇಡ್ಕರ್ ಆರ್ಥ ಆಗುತ್ತಾರೆ: ಕಿರಣ್ ಗಾಜನೂರ

ಕಲಬುರಗಿ: ಈ ದೇಶದಲ್ಲಿ ಡಾ. ಬಾಬಾಸಾಹೇಬ್ ಭೀಮರಾವ ಅಂಬೇಡ್ಕರ್ ಅವರನ್ನು ಅತಿ ಹೆಚ್ಚಾಗಿ ಪ್ರೀತಿಸುವವರು ತಳಸಮುದಾಯದ ಜನರು. ಬಾಲ್ಯದಿಂದಲೇ ಅವರು ಅವಗಾಹನೆಗೆ ಒಳಗಾದವರು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಾರ್ವಜನಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ್ ಗಾಜನೂರ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ್ 64ನೇ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರು ತೀರಿದ ನಂತರ ಅವರ ಪ್ರತಿಮೆಗಳಿಂದ ನಮಗೆ ಅವರು ಅರ್ಥ ಆಗಲ ಅದರ ಬದಲಾಗಿ ಅವರ ಬರಹಗಳಿಂದ ಮತ್ತು ಅವರು ಹಾಕಿ ಕೊಟ್ಟಿರುವ ಮಾರ್ಗದಲ್ಲಿ ನಡೆದರೆ ಮಾತ್ರ ನಮಗೆ ಡಾ. ಅಂಬೇಡ್ಕರ್ ಅರ್ಥ ಆಗುತ್ತಾರೆ. ಅಂಬೇಡ್ಕರ್ ಅವರೋಬ್ಬರು ಬಹುದೊಡ್ಡ ಸಂಶೋಧಕ ಅನ್ನೋದು ನಾವು ಇವತ್ತು ಮರೆತ್ತಿದ್ದೇವೆ. ಜಗತ್ತಿನಲ್ಲಿ ಅತ್ಯಂತ ದೊಡ್ಡ ಗ್ರಂಥಾಲಯ ಹೊಂದಿರುವ ಏಕೈಕ ವ್ಯಕ್ತಿ ಡಾ. ಅಂಬೇಡ್ಕರ್. ಇವತ್ತು ಅಂಬೇಡ್ಕರ್ ಸಿನಿಮಾ, ಧಾರಾವಾಹಿಗಳು ನೋಡುವುದರಲ್ಲಿಯೇ ಜನರು ಭಾವನಾತ್ಮಕವಾಗಿ ಕಳೆದು ಹೋಗುತ್ತಿದ್ದಾರೆ ಇದು ಬಹಳ ದುರಂತ ಅನಿಸುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಅಂಬೇಡ್ಕರ್ ಬಗ್ಗೆ ಚಳವಳಿ ಮಾಡುವುದಾದರೆ ಬೌದ್ಧಿಕವಾಗಿ ಅವರನ್ನು ತಿಳಿದು ಕೊಳ್ಳಬೇಕು ಎಂದು ಅವರು ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ. ಚಂದ್ರಕಾಂತ ಯಾತನೂರ ಮಾತನಾಡಿ ಇಂದಿನ ಡಿಜಿಟಲ್ ಯುಗದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಮಾಜಿಕ ಮಾಧ್ಯಮಗಳಲ್ಲಿ ಬಹಳ ವಿಕೃತಗೊಳಿಸು ಕೆಲಸ ನಡೆಯುತ್ತಿದೆ. ಹೀಗಾಗಿ ಅಂತಹ ಸಂದೇಶವನ್ನು ಯಾರು ಓದಬಾರದು. ಡಾ. ಅಂಬೇಡ್ಕರ್ ಅವರು ಪುಸ್ತಕಗಳಿಗೆ ಕೊಟ್ಟಿರುವ ಮಹತ್ವ ಮತ್ತೆ ಯಾವುದಕ್ಕೂ ಕೊಟ್ಟಿಲ್ಲ. ಇಂದು ನಾವೆಲ್ಲರೂ ಬರಹ ಮತ್ತು ಭಾಷಣ ಓದಿದಾಗ ಡಾ. ಅಂಬೇಡ್ಕರ್ ಅರ್ಥ ಆಗುತ್ತಾರೆ ಎಂದು ಅವರು ಹೇಳಿದರು.

ಡಾ. ಬಿ. ಆರ್. ಅಂಬೇಡ್ಕರ್ ಪರಿನಿರ್ವಾಣ ಸಮಿತಿ ಸಂಚಾಲಕ ಡಾ. ಗಣಪತಿ ಸಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿ ಡಾ.ಬಿ ಆರ್ ಅಂಬೇಡ್ಕರವರು ವ್ಯಕ್ತಿ ಮಾತ್ರವಲ್ಲ. ವ್ಯಕ್ತಿತ್ವವಾಗಿ ಗುರುತಿಸಲ್ಪಡುತ್ತಾರೆ .ಶ್ರೇಣೀಕೃತವಾದ ಅಸಮಾನತೆಯನ್ನು ಪೋಷಿಸುವ, ತಾರತಮ್ಯಗಳನ್ನು ಮಾನ್ಯ ಮಾಡುವ ಜಡ ಭಾರತದ ಇತಿಹಾಸವನ್ನು ಬದಲಿಸಿ, ಸಮತಾ ಸಮಾಜ ನಿರ್ಮಾಣ ಮಾಡಲು ಪಣತೊಟ್ಟ ಮಹಾ ಮಾನವತಾವಾದಿಯಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ಭವ್ಯ ಭಾರತದ ಕನಸು ಕಾಣುತ್ತಾ ಕಷ್ಟದ ನಡುವೆಯೂ ಬೆಳೆದ ಅಂಬೇಡ್ಕರ್ ಅವರು ನಮ್ಮ ದೇಶದ ಅಪೂರ್ವ ನಾಯಕರಲ್ಲಿ ಒಬ್ಬರಾದರು ಎಂದು ಅವರು ಹೇಳಿದರು.

ಕುಲಸಚಿವ ಪ್ರೊ. ಸಿ. ಸೋಮಶೇಖರ್, ಮೌಲ್ಯಮಾಪನ ಕುಲಸಚಿವ ಪ್ರೊ, ಸಂಜೀವಕುಮಾರ ಕೆ. ಎಂ, ವಿತ್ತಾಧಿಕಾರಿ ಡಾ. ಬಿ. ವಿಜಯ, ಸಿಂಡಿಕೇಟ್ ಸದಸ್ಯ ಡಾ. ಸಂಪತ್ ಕುಮಾರ್ ಲೋಯಾ, ಡಾ. ಬಾಬಣ್ಣ ಹೂವಿನಬಾವಿ, ಇತರರು ಹಾಜರಿದ್ದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

2 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

2 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

2 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

2 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

2 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420