ಸುರಪುರ: ಸಂವಿಧಾನ ಪೂರ್ವದಲ್ಲಿ ದೇಶ ಜಾತಿ ವಿಜಾತಿ ಮೇಲು ಕೀಳು ಉಚ್ಛ ನೀಚ ಎಂಬ ಮೂಢಂಧಕಾರದ ಕತ್ತಲೆಯಲ್ಲಿ ಮುಳುಗಿತ್ತು,ಇಂತಹ ದೇಶಕ್ಕೆ ಸಂವಿಧಾನವನ್ನು ರಚಿಸಿ ಕೊಡುವ ಮೂಲಕ ಡಾ: ಬಾಬಾ ಸಾಹೇಬ್ ಅಂಬೇಡ್ಕರರು ಈ ದೇಶಕ್ಕೆ ಬೆಳಕಾಗಿ ಬಂದರು ಎಂದು ಹೋರಾಟಗಾರ ಮಲ್ಲಿಕಾರ್ಜುನ ಕ್ರಾಂತಿ ಅಭಿಪ್ರಾಯ ಪಟ್ಟರು.
ನಗರದ ಡಾ:ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಮಹಾ ಪರಿನಿರ್ವಾಣ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿ,ದೀನ ದಲಿತ ಶೋಷತ ಹಿಂದುಳಿದ ಅಲ್ಪಸಂಖ್ಯಾತ ಎಲ್ಲರ ಉದ್ಧಾರಕರಾಗಿದ್ದವರು ಬಾಬಾ ಸಾಹೇಬರು,ಅಂತಹ ಮಹಾನ್ ಜ್ಯೋತಿ ಡಿಸೆಂಬರ್ ೬ ರಂದು ಮರೆಯಾದ ದುಃಖದ ದಿನವಿಂದು ಎಂದರು.
ಇದಕ್ಕು ಮುನ್ನ ಗೌತಮ ಬುದ್ಧ ವೃತ್ತದಲ್ಲಿ ಗೌತಮ ಬುದ್ಧರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಭೀಮರಾಯ ಸಿಂಧಗೇರಿ ನಗರಸಭೆ ಸದಸ್ಯ ಶಿವಕುಮಾರ ಕಟ್ಟಿಮನಿ ಸಾಂಚಿ ಎಮ್.ಕ್ರಾಂತಿ ಮಾನಪ್ಪ ಬಿಜಾಸಪುರ,ಬುದ್ಧಿವಂತ ನಾಗರಾಳ,ಜಟ್ಟೆಪ್ಪ ನಾಗರಾಳ,ಮರಲಿಂಗಪ್ಪ ಹುಣಸಿಹೊಳೆ,ಖಾಜಾ ಹುಸೇನ ಗುಡಗುಂಟಿ,ಯಂಕಪ್ಪ ದೇವಿಕೆರಾ,ಮರಲಿಂಗಪ್ಪ ದೇವಿಕೆರಾ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…