ಬಿಸಿ ಬಿಸಿ ಸುದ್ದಿ

ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಹಾ ಪರಿನಿರ್ವಾಣ ದಿನ ಆಚರಣೆ

ಸುರಪುರ: ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಸುರಪುರ ತಾಲೂಕು ಘಟಕ ದಿಂದ ಡಾ: ಬಾಬಾ ಸಾಹೇಬ ಅಂಬೇಡ್ಕರರ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ:ಬಿ.ಆರ್.ಅಂಬೇಡ್ಕರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಧಮ್ಮ ವಂದನೆಯ ಮೂಲಕ ಅಂಬೇಡ್ಕರರನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ಮಹಾದೇವಪ್ಪ ಸತ್ಯಂಪೇಟೆ ಮಾತನಾಡಿ,ದೀನ ದಲಿತರು ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಇಂದು ಸರಕಾರದ ಯಾವುದೇ ಯೋಜನೆಯ ಉಪಯೋಗ ಪಡೆಯುತ್ತಾರೆಂದರೆ ಅದಕ್ಕೆ ಬಾಬಾ ಸಾಹೇಬರು ಬರೆದು ಕೊಟ್ಟ ಸಂವಿಧಾನ ಕಾರಣವಾಗಿದೆ.ಅಂತಹ ಜಗತ್ತು ಮೆಚ್ಚುವ ಸಂವಿಧಾನವನ್ನು ಬರೆದು ಕೊಟ್ಟು ಅಂಬೇಡ್ಕರರು ಡಿಸೆಂಬರ್ ೬ ರಂದು ಈಹ ಲೋಕವನ್ನು ತ್ಯಜಿಸಿ ನಮ್ಮಿಂದ ಮರೆಯಾದ ಈ ದಿನವನ್ನು ಅಂದಿನಿಂದ ಮಹಾ ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಮಾನಪ್ಪ ಕರಡಕಲ್ ಮಾಳಪ್ಪ ಕಿರದಹಳ್ಳಿ ರಾಹುಲ್ ಹುಲಿಮನಿ ಗೋಪಾಲ ತಳವಾರ ಹಾಗು ಸಮಿತಿಯ ಗೌರವಾಧ್ಯಕ್ಷ ಹಣಮಂತ ತೇಲ್ಕರ್ ಉಪಾಧ್ಯಕ್ಷ ವೆಂಕಟೇಶ ಹುಲಿಕರ್ ಬಸವರಾಜ ಉಲ್ಪೇನವರ್ ಕೃಷ್ಣ ಕಟ್ಟಿಮನಿ ಹಣಮಂತ ಕಟ್ಟಿಮನಿ ಗೌತಮ ತೇಲ್ಕರ್ ಚಿರಂಜೀವಿ ಹುಣಸಿಹೊಳೆ ಮರೆಪ್ಪ ಚಲುವಾದಿ ಸೇರಿದಂತೆ ಅನೇಕರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago