ಒಬ್ಬ ಖರ್ಗೆಯನ್ನು ಸೋಲಿಸಿದಿರಿ  ಕಲಬುರಗಿಯಲ್ಲಿ ನೂರಾರು ಖರ್ಗೆ ಹುಟ್ಟಿಕೊಳ್ಳುತ್ತಾರೆ: ಖರ್ಗೆ

0
306

ಚಿತ್ತಾಪುರ: ಒಬ್ಬ ಖರ್ಗೆಯನ್ನು ಸೋಲಿಸಿದ್ದೇವೆ ಎಂದು ಬೀಗದಿರಿ ಇದೇ ತತ್ವ ಸಿದ್ಧಾಂತಗಳಿರುವ ನೂರಾರು ಖರ್ಗೆಯವರು ಕಲಬುರಗಿಯಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಖಗೆ೯ ಹೇಳಿದರು.

ಚಿತ್ತಾಪುರ ಪಟ್ಟಣದ‌ ಬಜಾಜ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ರತಜ್ಞತಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪಕ್ಷವನ್ನು ಇನ್ನಷ್ಟು ಬಲಪಡಿಸೋಣ. ಎಲ್ಲಿ ತಪ್ಪಾಗಿವೆಯೋ ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ನಾಗರೆಡ್ಡಿ ಪಾಟೀಲ ಕರದಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here