ಶಹಾಬಾದ:ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ|ಬಿ.ಆರ್.ಅಂಬೇಡ್ಕರ್ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.
ಅವರು ರವಿವಾರ ನಗರಸಭೆಯಲ್ಲಿ ಆಯೋಜಿಸಲಾದ ಡಾ|ಬಿ.ಆರ್.ಅಂಬೇಡ್ಕರ್ ರವರ ಮಹಾಪರಿನಿವರ್ಾಣ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬಾಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆಯನ್ನು ಅರಿತು ನಡೆಯಬೇಕಾಗಿದೆ.ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ ಮೆಹಬೂಬ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ,ರಾಜೇಶ ಯನಗುಂಟಿಕರ್, ಕಿರಣ ಕೋರೆ,ಮೆಹಬೂಬ, ಇಮ್ಯಾನುವೆಲ್, ಕಂದಾಯ ಅಧಿಕಾರಿ ಸುನೀಲಕುಮಾರ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ಜೆಟ್ಟೂರ್, ಹುಣೇಶ ದೊಡ್ಡಮನಿ, ಅನೀಲಕುಮಾರ ಹೊನಗುಂಟಿ,ಹಣಮಂತ ಪವಾರ, ಗೌತಮ, ಧೂಳಪ್ಪ, ರೌಫ್ ಸೇರಿದಂತರೆ ಅನೇಕರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…