ಒಂದು ದಿನದ ಸಾಮಾಜಿಕತೆಯ ಸದ್ಚಿಂತನೆ ಕಾರ್ಯಕ್ರಮ ಡಿ. 10 ರಂದು

ಕಲಬುರಗಿ: ಸಮೃದ್ಧಿಯ ಸವಿನೆನಪಿನಲ್ಲಿ ಜಾತಿ, ವರ್ಗ, ವರ್ಣರಹಿತ ಸಮಾಜಕ್ಕೆ ಬಸವಾದಿ ಶರಣರು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ಅವರ ವಚನ ಸಾಹಿತ್ಯದ ಅಮೃತವನ್ನು ಇಂದಿನ ಸಮಾಜಕ್ಕೆ ತಲುಪಿಸುವ ಸದುದ್ದೇಶದಿಂದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಹೆಚ್.ಕೆ.ಇ. ಸಂಸ್ಥೆಯ ಆಡಳಿತ ಮಂಡಳಿತ ಸದಸ್ಯರೂ ಆದ ಖ್ಯಾತ ವೈದ್ಯ ಡಾ.ಎಸ್.ಬಿ.ಕಾಮರೆಡ್ಡಿ ನೇತೃತ್ವದಲ್ಲಿ ಡಿ.೧೦ ರಂದು ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿನ ಕಲಾ ಮಂಡಳದಲ್ಲಿ ಸಾಮಾಜಿಕತೆಯ ಸದ್ಚಿಂತನೆ ಮೂಡಿಸುವ ‘ವಚನದೋಲಗ’ಎಂಬ ಒಂದು ದಿನದ ವೈಚಾರಿಕ ಚಿಂತನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರಪಂಚಕ್ಕೆ ಪರಿಚಯಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶ್ರಮಿಸಿದ ಶರಣರ ನಿಲುವು ಎಂದೆಂದಿಗೂ ಶಾಶ್ವತ. ಮೂಢನಂಬಿಕೆ, ಕಂದಾಚಾರಗಳನ್ನು ಬಂಡವಾಳ ಮಾಡಿಕೊಂಡು ಮುಗ್ಧ ಜನರಲ್ಲಿ ಭಯ ಹುಟ್ಟಿಸುತ್ತಿರುವವರ ಎದೆಯಲ್ಲಿ ನಡುಕ ಹುಟ್ಟಿಸಿದ ವೈಚಾರಿಕ ಕ್ರಾಂತಿಪುರುಷರು ಬಸವಾದಿ ಶರಣರಾಗಿದ್ದಾರೆ. ಅವರ ತಾತ್ವಿಕ ನಿಲುವು ಇಂದಿನ ಸಮಾಜಕ್ಕೆ ಅತೀ ಮುಖ್ಯವಾಗಿದೆ ಎಂದು ವಿವರಿಸಿದರು.

ಅಂದು ಬೆಳಗ್ಗೆ ೧೦.೩೦ ಕ್ಕೆ ಜರುಗುವ ಸಮಾರಂಭ ಮಾಜಿ ಎಂಎಲ್ಸಿ ಅಮರನಾಥ ಪಾಟೀಲ ಉದ್ಘಾಟಿಸಲಿದ್ದು, ಬೀದರಿನ ಶರಣ ಸಾಹಿತಿ ಶ್ರೀದೇವಿ ಹೂಗಾರ ‘ವಚನದೊಳಗಿನ ಜೀವನಧರ್ಮ’ ವಿಷಯದ ಕುರಿತು ಮಾತನಾಡಲಿದ್ದಾರೆ. ಶರಣಪ್ಪ ದೇಸಾಯಿ, ಈರಣ್ಣಾ ಗೋಳೆದ್, ಬಸವರಾಜ ಮದ್ರಿಕಿ ಶಹಾಬಾದ, ಪ್ರಭುಲಿಂಗ ಮೂಲಗೆ ಅತಿಥಿಗಳಾಗಿ ಆಗಮಿಸಲಿದ್ದು, ಬಸವರಾಜ ಬಿರಬಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.

ಅಪರಾಹ್ನ ೧೨.೩೦ ಕ್ಕೆ ನಡೆಯುವ ಶರಣರ ಸತ್ಯ ದರ್ಶನ ಗೋಷ್ಠಿಯಲ್ಲಿ ಅಫಜಲಪೂರಿನ ಅಮೃತರಾವ ಪಾಟೀಲ ಗುಡ್ಡೇವಾಡಿ ಅನುಭಾವ ನೀಡಲಿದ್ದು, ಶಾಂತಪ್ಪ ಸಂಗಾವಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುರೇಶ ಪಾಟೀಲ ಜೋಗೂರ, ನೀಲಕಂಠ ಆವಂಟಿ ಜೇವರ್ಗಿ, ಕವಿತಾ ಪಾಟೀಲ, ಅರವಿಂದ ಪೊದ್ದಾರ ಉಪಸ್ಥಿತರಿರುವರು. ಹಿರಿಯ ಸಂಗೀತ ಕಲಾವಿದ ಬಾಬುರಾವ ಕೋಬಾಳ ಹಾಗೂ ಸಂಗಡಿಗರಿಂದ ವಚನ ಗಾಯನ ನಡೆಯಲಿದೆ.

ಮಧ್ಯಾಹ್ನ ೨.೩೦ ಕ್ಕೆ ನಡೆಯುವ ಸಮಾರೋಪ ಹಾಗೂ ಜಾತಿ ಮೀರಿದ ವಚನಜ್ಯೋತಿ ಕಾರ್ಯಕ್ರಮದಲ್ಲಿ ಶರಣ ಸಾಹಿತಿ ವೆಂಕಟೇಶ ಜನಾದ್ರಿ ಅನುಭಾವ ನೀಡಲಿದ್ದು, ಸಾಹಿತಿ ಜಗನ್ನಾಥ ತರನಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ.ಎಸ್.ದೇಸಾಯಿ, ಕಲ್ಯಾಣಕುಮಾರ ಶೀಲವಂತ, ಗುರುಬಸಪ್ಪ ಸಜ್ಜನಶೆಟ್ಟಿ, ಹಣಮಂತ ಇಟಗಿ ಉಪಸ್ಥಿತರಿರುವರು.

‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆ: ವಿವಿಧ ಕ್ಷೇತ್ರದ ಸಾಧಕರಾದ ಕಾಡಸಿದ್ಧ ಜಮಶೆಟ್ಟಿ, ನಾಗಣ್ಣಾ ಹಾಗರಗುಂಡಗಿ ಯಡ್ರಾಮಿ, ಡಾ.ಛಾಯಾ ಭರತನೂರ, ದಾಸಿಮಯ್ಯಾ ವಡ್ಡಣಕೇರಿ, ಜೇವರ್ಗಿಯ ರಾಜೇಶ್ವರಿ ವಿ.ಪಾಟೀಲ ಸೇಡಂ, ಶರಣಬಸಪ್ಪ ಕುಡಕಿ, ಶರಣರಾಜ್ ಛಪ್ಪರಬಂದಿ, ಗುಂಡಪ್ಪ ಕರೇಮನೋರ್ ಅವರನ್ನು ಅಕಾಡೆಮಿ ವತಿಯಿಂದ ‘ವರ್ಷದ ವ್ಯಕ್ತಿ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ವಿಶೇಷ ಸತ್ಕಾರ: ತಮ್ಮ ವೃತ್ತಿಯಲ್ಲಿದ್ದುಕೊಂಡು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೆಂಕಟೇಶ ಮುದಗಲ್, ಈರಣ್ಣಾ ಮದಗುಣಕಿ, ಸಂಗನಬಸಪ್ಪ ಪಾಟೀಲ ದಿಕ್ಸಂಗಿ, ಪ್ರಭು ಆವಂಟಿ, ಮಾಲಾ ಕಣ್ಣಿ, ಕಲ್ಯಾಣಪ್ಪ ಬಿರಾದಾರ, ಹಣಮಂತ ಮಂತಟ್ಟಿ, ಸವಿತಾ ಬಿರಾದಾರ, ಸಚೀನ್ ಮಣೂರೆ, ಶಾಂತರೆಡ್ಡಿ ಪೇಠಶಿರೂರ, ಸಂದೀಪ ಭರಣಿ, ಶ್ರೀಧರ ನಾಗನಹಳ್ಳಿ, ಚೇತನ್ ಬಾಬುರಾವ ಕೋಬಾಳ ಅವರನ್ನು ಸಹ ಇದೇ ವಿಶೇಷವಾಗಿ ಸತ್ಕರಿಸಲಾಗುವುದು.

emedialine

Recent Posts

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

47 mins ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

2 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

2 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

16 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

16 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420