ಸರ್ವರು ಜಾತಿಬೇದ ಮರೆತು ಬಾಳಬೇಕು: ಶಶೀಲ ನಮೋಶಿ

ಕಲಬುರಗಿ: ಸರ್ವರನ್ನೂ ಜೊತೆಯಲ್ಲಿ ತೆಗೆದುಕೊಂಡು, ಸರ್ವರಿಗೂ ಸಮಬಾಳು, ಸಮಪಾಲು ಎನ್ನುತ್ತಾ ನಾವೆಲ್ಲರೂ ಜಾತಿಬೇದ ಮರೆತು ಬಾಳಬೇಕೆಂದು ನೂತನವಾಗಿ ಆಯ್ಕೆಗೊಂಡ ಬಿಜೆಪಿ ವಿಧಾನ ಪರಿಷತ ಸದಸ್ಯ ಶಶೀಲ ನಮೋಶಿ ಹೇಳಿದರು.

ಅವರು ನಗರದ ಶಹಬಜಾರ ಬಡಾವಣೆಯ ವೀರಶೈವ ಲಿಂಗಾಯತ ಬಂದು ಸಮಾಜದ ವತಿಯಿಂದ ಹಮ್ಮಿಕೊಳ್ಳಲಾದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಬಸವಣ್ಣನವರು ಮೇಲು ಕಿಳೂ ಎಂಬ ಬೇದಭಾವನ್ನು ದೂರಮಾಡಿ ಇವ್ ನಮ್ಮವ ಎಂಬ ಸಂದೇಶ ಸಾರಿ ಹೋಗಿದ್ದಾರೆ. ಅವರ ಹಾಕಿಕೊಟ್ಟಂತಹ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದರು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ನಮ್ಮವ ಎಂಬ ಭಾವ ಮೂಡಿದಾಗಲೇ ಸಮಾಜ ಅಭಿವೃದ್ಧಿಯಾಗುತ್ತದೆ. ಹಾಗೇ ನಮ್ಮ ಸಮಾಜದ ಏಳಿಗೆಗೆ ನಾವೆಲ್ಲರೂ ಶ್ರಮಿಸಬೇಕೆಂದು ಹೇಳಿದರು. ಈ ದೇಶದ ಸಂವಿಧಾನದ ಅಢಿಯಲ್ಲಿ ನಾವೆಲ್ಲರೂ ಸರ್ವರು ನಮ್ಮವರೆಂದು ಸಾರಿದ ಅಂಬೇಡ್ಕರ್ ಹಾಗೂ ಬಸವಣ್ಣನವರ ಹಿತನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ, ಬೆಂಗಳೂರು ಇದರ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಮಾತನಾಡಿ, ಶಹಬಜಾರ ಬಡಾವಣೆಯೂ ನನ್ನ ಪಾಲಿಗೆ ಗಂಗೆ ಸ್ವರೂಪ ಇದ್ದಂಗೆ. ಇಲ್ಲಿಯ ಹಿರಿಯ ನಾಯಕರ, ಕಾರ್ಯಕರ್ತರ ಆಶಿರ್ವಾದದಿಂದಲೇ ನನಗೆ ಈ ಸ್ಥಾನ ಸಿಕ್ಕಿದೆ ಎಂದರು. ೧೩ ವರ್ಷಗಳ ಬಳಿಕ ಉತ್ತರ ಮತಕ್ಷೇತ್ರದಲ್ಲಿ ದೀಪ ಬೆಳಗಿದೆ. ಈ ದೀಪವನ್ನು ಪ್ರತಿ ಮನೆಯಲ್ಲಿ ಹಚ್ಚುವ ಕೆಲಸ ನಾನು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿ, ನಿಮ್ಮೆಲ್ಲರ ಸಹಕಾರ ಮುಂಬರುವ ದಿನಗಳಲ್ಲಿ ಹೀಗೆ ಇರಲಿ ಎಂದು ಮನವಿ ಮಾಡಿ, ನಿಮ್ಮೆ ಸೇವೆಗಾಗಿ ನಾನು ಸದಾ ಸಿದ್ದನಿದ್ದೇನೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ಸಾರಂಗಧರ ದೇಶಿಕೆಂದ್ರ ಮಹಾಸ್ವಾಮಿಗಳು ಶ್ರೀಶೈಲಂ, ಸುಲಪಲಮಠ, ಶ್ರೀ ರಾಜಶೇಖರ ಶಿವಾಚಾರ್ಯರು ಚವದಾಪುರಿ ಮಠ ವಹಿಸಿದ್ದರು. ಸ್ವಾಗತ ಬಾಷಣವನ್ನು ವಕೀಲರಾದ ಈರಣ್ಣ ಗೊಳೆದ ಮಾಡಿದರು. ವೇದಿಕೆ ಮೇಲೆ ಬಿಜೆಪಿ ಅಧ್ಯಕ್ಷ ಸಿದ್ದಾಜೀ ಪಾಟೀಲ, ಸಮಾಜದ ಅಧ್ಯಕ್ಷರಾದ ಶರಣಬಸಪ್ಪ ರೇವೂರೆ, ಮಲ್ಲಿಕಾರ್ಜುಣ ಖೇಮಜಿ, ಶಿವಾನಂದ ಬಂಡಕ, ಲಿಂಗಣ್ಣ ಮಳ್ಳಿ, ಮಲ್ಲಿಕಾರ್ಜುಣ ಓಕಳಿ, ಅಪ್ಪು ಅಸ್ಪಲ್ಲಿ, ಪ್ರಭು ಹಾದಿಮನಿ, ಉತ್ತರ ಮಂಡಲದ ಅದ್ಯಕ್ಷ ಅಶೋಕ ಮಾನಕರ್, ಸೇರಿದಂತೆ ಸಮಾಜದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಪದವಿಗೆ ಭಾಜನರಾದ ಪೋಲಿಸ್ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

10 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

10 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

10 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

10 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

11 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420