ಗೋಹತ್ಯೆ ನಿಷೇದ ಕಾಯ್ದೆ ಜಾರಿ ಸ್ವಾಗತ: ಮಹೇಶ ಬೀದರಕರ

ಕಲಬುರಗಿ: ಗೋಹತ್ಯೆ ಕಾಯ್ದೆ ನಿಷೇದ ಜಾರಿಯ ವಿಷಯವನ್ನು ಒಂದು ರಾಜಕೀಯ ದಾಳವಾಗದೆ ಗೋವುಗಳ ರಕ್ಷಣೆ ತನ್ಮಮೂಲಕ ಬೇಸಾಯ ಪೋಷಣೆಗೆ ರಾಜ್ಯ ಸರ್ಕಾರ ಕಾಯ್ದೆ ಜಾರಿ ಮಾಡಲು ಮನಸ್ಸು ಮಾಡಿದ್ದು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಒಂದುಗೂಡಿ ನಮ್ಮ ಸಂಸ್ಕ್ರತಿ ಹಾಗೂ ಗೋಸಂತತಿ ಉಳಿಸಿಕೊಳ್ಳಲು ಸರ್ಕಾರ ತೆಗೆದುಕೊಂಡ ಕಾಯ್ದೆ ಜಾರಿ ನಿರ್ಧಾರ ಸ್ವಾಗತ ಎಂದು ಕುಸನೂರ ಹೊರ ವಲಯದ ಮಾಧವ ಗೋ ಶಾಲೆಯಲ್ಲಿ ಕಾಯ್ದೆಯ ಸಂಭ್ರಮಾಚರಣೆಯ ಸಮಾರಂಭದಲ್ಲಿ ಗೋವುಗಳಿಗೆ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ನಿರಂತರವಾಗಿ ಗೋ ಸೇವೆ ಮಾಡುತ್ತಿರುವ ಮಹೇಶ ಬೀದರಕರವರು ಹರ್ಷ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಗೋ ಭಾವನಾತ್ಮಕ, ಸಂಸ್ಕೃತಿಕ ಮತ್ತು ಸಂಪ್ರದಾಯಕ ಆಯಾಮಗಳನ್ನೊಳಗೊಂಡಿದೆ. ಭಾರತದಲ್ಲಿ ಗೋವಿಗೆ ಇರುವ ಪೂಜ್ಯ ಸ್ಥಾನ ಪ್ರಪಂಚದ ಬೇರೆ ಯಾವ ದೇಶದಲ್ಲಿಯೂ ಇಲ್ಲ ಇಂತಹ ಒಂದು ಸುನಾತನ ಸಂಸ್ಕ್ರತಿ ಉಳಿಸುವುದು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕೆಂಬ ಸದ್ದುದ್ದೇಶದಿಂದ ಕಾಯ್ದೆ ಜಾರಿಯ ಸಂಭ್ರಮ ಆಚರಣೆಯಲ್ಲಿ ಗೆಳೆಯ ಸಂಗಮೇಶ ಕರಡಿಯವರು ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಗೋವುಗಳಿಗೆ ವಿಷೇಶ ಪೂಜೆ ಸಲ್ಲಿಸುವುದರೊಂದಿಗೆ ಆಚರಿಸುಕೊಳ್ಳುತ್ತಿರುವುದು ತುಂಬ ಶ್ಲಾಘನೀಯವಾದುದು ಏಕೆಂದರೆ ಹುಟ್ಟುಹಬ್ಬ ಸಂಭ್ರಮ ವ್ಯಯಕ್ತಿಕವಾದರು ಇಂತಹ ಸಮಾರಂಭ ಆಯೋಜಿಸಿ ಸಾರ್ವತ್ರಿಕವಾಗಿ ಆಚರಿಸುವುದರೊಂದಿಗೆ ಬಂದು-ಬಳಗದವರಿಗೂ ವಿಶೇಷವಾಗಿ ಸಣ್ಣ-ಸಣ್ಣ ಮಕ್ಕಳಿಗೂ ನಮ್ಮ ಸಂಸ್ಕೃತಿ ಹಾಗೂ ಪದ್ಧತಿಯಲಿರುವ ವಿಶೇಷತೆ ಬಗ್ಗೆ ಬೆಳಕು ಚಲ್ಲುವಂತಹ ಕಾರ್ಯಕ್ರಮ ಇದಾಗಿದೆ ಎಂದು ವಚನೋತ್ಸವ ಪ್ರತಿಷ್ಠಾನದ ಯುವ ಘಟಕದ ಅಧ್ಯಕ್ಷ ಶಿವರಾಜ ಅಂಡಗಿ ಮಾತನಾಡಿದರು.

ಸದರಿ ಕಾಯ್ದೆಯ ಜಾರಿಯ ಸಂಭ್ರಮಾಚರಣೆಯಲ್ಲಿ ಪ್ರೋ. ಅರವಿಂದ ಕರಡಿ, ಡಾ. ಶರಣಬಸಪ್ಪ ಕರಡಿ, ಸಂಗಮೇಶ ಕರಡಿ, ಶಿವಶರಣ ಪಾಟೀಲ್, ಹಣಮಂತರಾವ ಪಾಟೀಲ್, ರಾಜಶೇಖರ ಮರಪಳ್ಳಿ, ವಿಲಾಸ ಹಸರಗುಂಡೆ, ಪ್ರವೀಣ ಯಾಳಗಿ, ಸಾಗರ ರಾಮಣ್ಣ, ಅರ್ಪಣಾ, ಚೇತನ, ಮಹಾನಂದ, ಜ್ಯೋತಿ, ಸುಮಂಗಲಾ, ಪ್ರತೀಕ್ಷಾ, ತನುಷ್ಕಾ, ಆರೂಷ ಕರಡಿ ಹಾಗು ಇತರರು ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

26 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

47 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420