ಬಿಸಿ ಬಿಸಿ ಸುದ್ದಿ

ಕರ್ನಾಟಕ ಧನವಿನಿಯೋಗ (ಸಂಖ್ಯೆ 4) ವಿಧೇಯಕ ಅಂಗೀಕಾರ : ಬಸವರಾಜ ಬೊಮ್ಮಾಯಿ

ಬೆಂಗಳೂರು: 2020ನೇ ಸಾಲಿನ “ಕರ್ನಾಟಕ ಧನ ಧನವಿನಿಯೋಗ (ಸಂಖ್ಯೆ 4) ವಿಧೇಯಕವನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳ ಪರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ವಿಧಾನಪರಿಷತ್‍ನಲ್ಲಿ ಪ್ರಸ್ತಾವನೆ ಮಂಡಿಸಿದರು.

ಪ್ರಸ್ತಾವನೆ ಮಂಡಿಸಿದ ನಂತರ ವಿವರಣೆ ನೀಡಿದ ಸಚಿವರು, ವಾರ್ಷಿಕವಾಗಿ ಬಜೆಟ್ ಮಂಡಿಸಿದ ಮೇಲೆ ಕೆಲವು ವಿಶೇಷ ಸೇವೆಗಳ  ವೆಚ್ಚ ಬರುವ ಸಂದರ್ಭದಲ್ಲಿ ವೆಚ್ಚ ಮಾಡಲು  ಪ್ರಸಕ್ತ ಸಾಲಿನ ಎರಡನೇ ಕಂತಿನಲ್ಲಿ 3320.40 ಕೋಟಿ ರೂಗಳ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾಪ ಸಲ್ಲಿಸಿದರು.

ಈ ಅನುದಾನವನ್ನು ಕೋವಿಡ್ 19ರ ಮಾರಕ ರೋಗ ನಿಯಂತ್ರಣಕ್ಕೆ ಹಾಗೂ ನೈಸರ್ಗಿಕ ವಿಕೋಪಗಳಿಗೆ ಬಳಕೆ ಮಾಡಲಾಗುವುದು. ಉಳಿದಂತೆ ರೂ.2210 ಕೋಟಿ ಗಳನ್ನು ಅಭಿವೃದ್ಧಿಗೆ ಪೂರಕವಾದ ಯೋಜನೆಗಳಿಗೆ ವಿನಿಯೋಗಿಸಲಾಗುವುದು ಎಂದರು.

ನಂತರ ಎಲ್ಲರ ಅನುಮತಿಯೊಂದಿಗೆ  2020ನೇ ಸಾಲಿನ “ಕರ್ನಾಟಕ ಧನ ಧನವಿನಿಯೋಗ (ಸಂಖ್ಯೆ 4) ವಿಧೇಯಕವನ್ನು ಅಂಗೀಕರಿಸಿ, ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರಿಗೆ ನೀಡುವ ಕೆಲವು ಯೋಜನೆಗಳನ್ನು ಕಡಿತಗೊಳಿಸಲಾಗಿದೆ ಎಂಬ ಚರ್ಚೆಗೆ  ಬಸವರಾಜ ಬೊಮ್ಮಾಯಿ ಅವರು ಕೋವಿಡ್ 19 ಹಾಗೂ ನೈಸರ್ಗಿಕ ವಿಕೋಪಗಳಿಂದ ಸರ್ಕಾರ ನಷ್ಟ ಅನುಭವಿಸಿದ್ದರೂ ಸಹ ಸಾಮಾಜಿಕ ಭದ್ರತಾ ಯೋಜನೆಯಡಿ  ಅಕ್ಟೋಬರ್ ಮಾಹೆಯವರೆಗೆ 67.5 ಲಕ್ಷ ಜನರಿಗೆ ಮಾಸಾಶನ ಮಂಜೂರು ಮಾಡಲಾಗಿದೆ.  ಸುಮಾರು 2.50 ಲಕ್ಷ ಜನರಿಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಮಾಸಾಶನ ಮಂಜೂರಾಗಿಲ್ಲ. ಇದನ್ನು ಸರಿಪಡಿಸಿದ ತಕ್ಷಣ ಮಾಸಾಶನ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.

ಬೇರೆ ರಾಜ್ಯದವರು ಸರ್ಕಾರಿ ನೌಕರರ ವೇತನವನ್ನು ಕಡಿತಗೊಳಿಸಿದ್ದಾರೆ. ಆದರೆ ನಮ್ಮ ಸರ್ಕಾರ ನೌಕರರ ವೇತನವನ್ನು ಕಡಿತಗೊಳಿಸಿಲ್ಲ ಇನ್ನು ಮುಂದೆಯೂ ಸಹ ಕಡಿತಗೊಳಿಸುವುದಿಲ್ಲ. ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ತೆರಿಗೆಯಲ್ಲಿ ಸುಧಾರಣೆ ಕಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಚೇತರಿಕೆ ಕಂಡು ಬಂದರೂ ಸಹ ಯಾವ ಯೋಜನೆಗಳನ್ನು ಕಡಿತಗೊಳಿಸುವುದಿಲ್ಲ.  ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡಲಾಗುವುದು ಎಂದು ಸದನದಲ್ಲಿ ತಿಳಿಸಿದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

49 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago