ಬೆಂಗಳೂರು: ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕಕ್ಕೆ ಅನುಮೋದನೆ ನೀಡುವಂತೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರಸ್ತಾವನೆಯನ್ನು ಮಂಡಿಸಿದರು.
ಎಲ್ಲಾ ಸದಸ್ಯರ ಅನುಮತಿಯೊಂದಿಗೆ ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕದ ಪ್ರಸ್ತಾಪವನ್ನು ಅಂಗೀಕರಿಸಿ, ವಿಧೇಯಕಕ್ಕೆ ಸದನದಲ್ಲಿ ಅನುಮೋದನೆ ನೀಡಲಾಯಿತು.