ಡಾ.ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆ: ೧ ಲಕ್ಷ ಪುಷ್ಪ ಬಿಲ್ವಾರ್ಚನೆ

0
37

ಕಲಬುರಗಿ: ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಡಿ.೧೪ರಂದು ಬೆಳಗ್ಗೆ ೫ರಿಂದ ೧೨ರ ವರೆಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಾಸದ ಕೊನೆಯ ದಿನದ ಪ್ರಯುಕ್ತ ನಡೆದಾಡುವ ದೇವರು ಡಾ.ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಗೆ ೧ ಲಕ್ಷ ಪುಷ್ಪ ಬಿಲ್ವಾರ್ಚನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ್ ರಾಜ್ಯ ಸಮಿತಿ ಸದಸ್ಯ ಶ್ರೀಧರ ನಾಗನಹಳ್ಳಿ, ಜಿಲ್ಲಾ ಉಪಾದ್ಯಕ್ಷ ಕಲ್ಯಾಣರಾವ್ ಪಾಟೀಲ್ ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಭಕ್ತಾದಿಗಳು ಮನೆಯಲ್ಲಿಯೇ ಕುಳಿತು ಯೂಟ್ಯೂಬ್ ಚಾನೆಲ್ ಆದ www.youtube.com/vlyvedike ನಲ್ಲಿ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ ವೀಕ್ಷಿಸಬಹುದು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here